ಬ್ಲಾಗ್ ಬೀಟ್ 8

ಕನ್ನಡದ ಬ್ಲಾಗುಗಳ ಲೋಕದಲ್ಲಿ ವಿಡಂಬನೆ, ಫೇಕ್ ನ್ಯೂಸ್, ಕಾಲೆಳೆಯುವಿಕೆ, ನವಿರಾದ ಹಾಸ್ಯ, ವಕ್ರತುಂಡೊಕ್ತಿ ಯಾವುದಕ್ಕೂ ಕೊರತೆಯಿಲ್ಲ. ವಾರಕ್ಕೊಂದು ಬಾರಿ ಕನ್ನಡದ ಬ್ಲಾಗು ತೋಟವನ್ನು ಹೊಕ್ಕು ಅಲ್ಲಿನ ರಸವತ್ತಾದ ಬರಹಗಳನ್ನು ಹೆಕ್ಕಿ ತಂದು ಪಟ್ಟಿ ಮಾಡುವ ಕೆಲಸವನ್ನು ಒಪ್ಪಿಕೊಂಡಿದ್ದಾರೆ ಸುದ್ದೀಶ. ಇವರ ಬ್ಲಾಗ್ ಬೀಟ್‌ಗೆ ನಿಮ್ಮ ಬ್ಲಾಗೂ ಈಡಾಗಬೇಕೆಂಬ ಆಸೆಯಿದ್ದರೆ ನಿಮ್ಮ ಬ್ಲಾಗಿನ ವಿಳಾಸ ಕೊಟ್ಟು ನಮ್ಮ ವಿಳಾಸಕ್ಕೆ ಒಂದು ಮಿಂಚಂಚೆ ಕಳುಹಿಸಿ.

………………………………………………………………..

ಪಂಚ್ ಲೈನ್

ಪಂಚು ಹೊಡೆಯುವುದರಲ್ಲಿ ಸಿದ್ಧ ಹಸ್ತರಾಗಿ ಕಾಣುವ ಗಣೇಶ್ ನಿಜವಾದ ಮೌತ್ ಕಾ ಸೌದಾಗರ್ ನಮ್ಮ ಸೋನಿಯಮ್ಮ ಹೇಳಿದ ಹಾಗೆ ಗುಜರಾಥಿನ ನರೇಂದ್ರ ಮೋದಿಯಲ್ಲ. ಮತ್ತ್ಯಾರು? ಹಾಗಾದರೆ ಈ ಲಿಂಕನ್ನು ಕ್ಲಿಕ್ಕಿಸಿ.

ಸಂತೆ ನೆರೆಯುವುದಕ್ಕೆ ಮುನ್ನವೇ ಗಂಟು ಕಳ್ಳರು ದೌಡಾಯಿಸಿದರು ಎಂಬಂತೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ನೂ ತೆರೆಯುವುದಕ್ಕೆ ಮುಂಚೆಯೇ ಅದಕ್ಕೆ ಯಾವ ಹೆಸರಿಡಬೇಕು ಎಂಬ ಬಗ್ಗೆ ಚೌಕಾಶಿ ನಡೆಯಲು ಶುರುವಾಗಿದೆ. ಕೆಂಪೇ‘ಗೌಡ’ರ ಹೆಸರಿಡಬೇಕೋ, ವಿಶ್ವೇಶ್ವರ‘ಅಯ್ಯ’ನವರ ಹೆಸರಿಡಬೇಕೋ, ಟಿಪ್ಪು ‘ಸುಲ್ತಾನ್’ನ ಹೆಸರನ್ನು ಮಡಗಬೇಕೋ ಅನ್ನೋ ವಿಚಾರವಾಗಿ ಭಾರೀ ‘ಚರ್ಚೆ’ ನಡೆಯುತ್ತಿದೆ. ಇದಕ್ಕೊಂದು ಒಳ್ಳೆಯ ಪರಿಹಾರವನ್ನು ಗಣೇಶ್ ಕೊಟ್ಟಿದ್ದಾರೆ. ವಿಮಾನ ನಿಲ್ದಾಣಕ್ಕೆ ಯಾರ ಹೆಸರು ಸೂಕ್ತ?

………………………………………………………………..

ಬೊಗಳೆ ರಗಳೆ

ಕನ್ನಡ ನಾಡಿನ ಪತ್ರಿಕೆಗಳೆಲ್ಲಾ ರಾಜಕೀಯದ ಬಿಸಿಯನ್ನು ಮನೆ ಮೆನೆಗೆ ತಲುಪಿಸಿ ಬೇಸಿಗೆಯನ್ನು ಮತ್ತಷ್ಟು ಅಸಹನೀಯಗೊಳಿಸುವಲ್ಲಿ ಪೈಪೋಟಿ ನಡೆಸುತ್ತಿರುವಾಗ ಬೊಗಳೂರು ಭಯ ಭೀತ ಬ್ಯೂರೋ ತಾನೇನೂ ಕಡಿಮೆಯಿಲ್ಲ ಎಂದು ರಾಜಕೀಯ ವರದ್ದಿಯನ್ನು ಪ್ರಕಟಿಸಿದೆ. ರಾಜ್ಯಾದ್ಯಂತ ನೇತಾಗಳೆಂಬ ಭೂತಗಳು ಓಡಾಡುತ್ತಾ ಭಯೋತ್ಪಾದನೆ ಮಾಡುತ್ತಿರುವುದನ್ನು ‘ರಾತ್ರಿ ಏಳರವರೆಗಿನ ಪ್ರಜ್ಞಾವಂತ’ ಮತದಾರ ಅನಂತರ ಕಣ್ಣು ಕೆಂಪು ಮಾಡಿಕೊಂಡು ನೋಡುತ್ತಿರುವುದನ್ನು ಬೊಗಳೂರು ವಾಹ್-ರದ್ದಿಗಾರ ತಂದು ಸುರಿದಿದ್ದಾನೆ.

………………………………………………………………..

ಮಜಾವಾಣಿ

ಚುನಾವಣೆಗಳು ಹತ್ತಿರಬಂದಾಗ ಪತ್ರಿಕೆಗಳು ಮದುವೆ ಮನೆಯಲ್ಲಿ ಸಿಂಗಾರಗೊಂಡ ವಧುವಿನ ಹಾಗಾಗಿರುತ್ತವೆ. ಇದಕ್ಕೆ ಅಂತರ್ಜಾಲದ ಅತ್ಯಂತ ‘ಜನಪ್ರಿಯ’ ‘ವಿಶ್ವಾಸಾರ್ಹ’ ಪತ್ರಿಕೆಯೂ ಕಡಿಮೆಯಿಲ್ಲ. ಅವರು ಚುನಾವಣೆಯ ಸಂದರ್ಭದಲ್ಲಿ ಜನಮತವನ್ನು ಸಂಗ್ರಹಿಸಿ ತಮ್ಮ ಪತ್ರಿಕೆಯಲ್ಲಿ ಚಾಪಿಸಿಕೊಂಡಿದ್ದಾರೆ. ಮುಂದಿನದು ಸಂಪಾದಕರ ಮಾತುಗಳಲ್ಲಿ…

ಕರ್ನಾಟಕ ರಾಜ್ಯಕ್ಕೆ ಇದು ಸಂಕ್ರಮಣ ಕಾಲ. ಯಾರಿಂದ ನಾವು ಮೋಸ ಹೋಗಬೇಕೆಂದು ನಿರ್ಧರಿಸ ಬೇಕಾದ ಕಾಲ. ಇಂತಹ ಸಂದರ್ಭದಲ್ಲಿ,  ನಮ್ಮ ನಾಡು,ನುಡಿ, ರಾಜಕಾರಣಗಳ ಬಗೆಗೆ ನಮ್ಮ ಜನರ ನಾಡಿ ಹೇಗೆ ಮಿಡಿಯುತ್ತಿದೆ, ಅವರನ್ನು ಕಾಡುತ್ತಿರುವ ವಿಷಯಗಳೇನು ಎಂಬುದನ್ನು ಅವರ ಮಾತುಗಳಲ್ಲೇ ಇಲ್ಲಿ ಹಿಡಿದು ಕೊಡಲಾಗಿದೆ.   – ಸಂ.

………………………………………………………………..

ಪ್ರಕಾಶ್ ಶೆಟ್ಟಿ ಪಂಚ್

ಶೆಟ್ಟಿಯವರ ಗೆರೆಗಳಲ್ಲಿ ಸೆರೆಯಾಗಿರುವ ಸಂಗತಿಗಳು ಹಲವು. ಗರ್ಜಿಸುವುದನ್ನೇ ಮರೆತಿರುವ ಮಹಾರಾಷ್ಟ್ರದ ಹಳೆಯ ಹುಲಿಯ ಅಳಲಾದರೂ ಏನು? ಜಾರ್ಜು ಬುಸ್ಸು ಇನ್ ಫ್ಲೇಷನ್ನಿಗೆ ಸಂ-ಚೋದಿಸಿದ ಕಾರಣ ಯಾವುದು? ಚುನಾವಣೆ ಕಿಕ್ಕಿಗಾಗಿ ಕೆಲವು ಶೆಟ್ಟಿ ಪಂಚುಗಳು….

………………………………………………………………..

Respond to this post