ನಗೆ ನಗಾರಿ ಡಾಟ್ ಕಾಮ್

ಬ್ಲಾಗ್ ಬೀಟ್ 9

June 17, 2008 · Leave a Comment

ಕನ್ನಡದ ಬ್ಲಾಗುಗಳ ಲೋಕದಲ್ಲಿ ವಿಡಂಬನೆ, ಫೇಕ್ ನ್ಯೂಸ್, ಕಾಲೆಳೆಯುವಿಕೆ, ನವಿರಾದ ಹಾಸ್ಯ, ವಕ್ರತುಂಡೊಕ್ತಿ ಯಾವುದಕ್ಕೂ ಕೊರತೆಯಿಲ್ಲ. ವಾರಕ್ಕೊಂದು ಬಾರಿ ಕನ್ನಡದ ಬ್ಲಾಗು ತೋಟವನ್ನು ಹೊಕ್ಕು ಅಲ್ಲಿನ ರಸವತ್ತಾದ ಬರಹಗಳನ್ನು ಹೆಕ್ಕಿ ತಂದು ಪಟ್ಟಿ ಮಾಡುವ ಕೆಲಸವನ್ನು ಒಪ್ಪಿಕೊಂಡಿದ್ದಾರೆ ಸುದ್ದೀಶ. ಇವರ ಬ್ಲಾಗ್ ಬೀಟ್‌ಗೆ ನಿಮ್ಮ ಬ್ಲಾಗೂ ಈಡಾಗಬೇಕೆಂಬ ಆಸೆಯಿದ್ದರೆ ನಿಮ್ಮ ಬ್ಲಾಗಿನ ವಿಳಾಸ ಕೊಟ್ಟು ನಮ್ಮ ವಿಳಾಸಕ್ಕೆ ಒಂದು ಮಿಂಚಂಚೆ ಕಳುಹಿಸಿ.

………………………………………………………………

ಬೊಗಳೆ ರಗಳೆ

ಇಂಧನ ಬೆಲೆಯೇರಿಕೆಯ ವಿರುದ್ಧ ವಾಹನ ಚಾಲಕರು ಬೈದಾಡಿ ಬಾಯಿ ಸೇವೆ ಮುಗಿಸಿಕೊಂಡು ತಮ್ಮ ಗಾಡಿಗಳಿಗೆ ಇಂಧನ ತುಂಬಿಸಿಕೊಂಡು ರೊಯ್ಯನೆ ಹೊರಡುತ್ತಿರುವಾಗ ಬೊಗಳೆ ರಗಳೆರ ಸೊಂಪಾದಕರಿಗೆ ಸಂಕಟದ ಸ್ಥಿತಿ ಬಂದಿದೆ. ಬೊಗಳೆ ಬಿಡುವುದರಲ್ಲಿ ಬೊಗಳೂರಿನಲ್ಲೇ ಫೇಮಸ್ಸಾದ ಸೊಂಪಾದಕರನ್ನೇ ಮೀರಿಸುವ ಹಾಗೆ ಎಡ, ಬಲ ಪಕ್ಷಗಳು, ಕೈ ಕಾಲು ಪಕ್ಷಗಳು, ನಿಧಾನ ಮಂತ್ರಿ, ಪಿತ್ಥ ಸಚಿವರು ಬೊಗಳೆ ಬಿಡುತ್ತಿರುವುದನ್ನು ಕಂಡು ಅಕ್ಷರಶಃ ಕಂಗಾಲಾಗಿದ್ದಾರೆ.

ವಿಜ್ಞಾನಿಗಳು ಗಾಳ ಹಾಕಿ ಮೀನುಗಳನ್ನು ಹಿಡಿಯುವ ಕೋತಿಯನ್ನು ಪತ್ತೇ ಹಚ್ಚಿರುವುದನ್ನು ಎಸ್.ಎಂ.ಎಸ್ ಮೂಲಕ ತಿಳಿದು ಗಾಬರಿಯಿಂದ ನಾಪತ್ತೆಯಾಗಿದ್ದ ಏಕಸದಸ್ಯ ಬ್ಯೂರೋದ ಸಮಸ್ತ ಸಿಬ್ಬಂದಿ ಈಗ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಏಕೆಂದಿರಾ? ಇಲ್ಲಿ ಓದಿ…

ಪ್ರಕಾಶ್ ಶೆಟ್ಟಿ ಗೆರೆಗಳ ಪಂಚ್

ಬೆಲೆಯೇರಿಕೆ, ಪೆಟ್ರೋಲು ಬೆಲೆ ತುಟ್ಟಿ… ಕಾಂಗ್ರೆಸ್ ಸರಕಾರದ ನಿಷ್ಠೆಯ ನವೀಕರಣ… ಎಲ್ಲಕ್ಕೂ ಪ್ರಕಾಶ್ ಶೆಟ್ಟಿ ಗೆರೆಗಳನ್ನು ಕೊಟ್ಟಿದ್ದಾರೆ, ಗೆರೆಗಳ ಮೂಲಕ ಬರೆ ಎಳೆದಿದ್ದಾರೆ. ಇಲ್ಲಿ ನೋಡಿ .

ಪಂಚ್ ಲೈನ್

ಪಂಚಿಗಾಗಿ ಲೈನುಗಳನ್ನು ಬರೆಯುವ ಗಣೇಶ್ ಬಹುದೊಡ್ಡ ಮ್ಯಾನೇಜ್ ಮೆಂಟ್ ಗುರುವಾಗುವ ಎಲ್ಲಾ ಲಕ್ಷಣಗಳನ್ನು ತೋರ್ಪಡಿಸುತ್ತಿದ್ದಾರೆ. ಅವರ ಇತ್ತೀಚಿನ ಪಂಚ್ ಸಾಲುಗಳನ್ನೇ ನೋಡಿ…
ಕೊಲೆ ಮಾಡಿಯೂ ಶಿಕ್ಷೆ ಅನುಭವಿಸಬಾರದೆಂದರೆ ಏನು ಮಾಡಬೇಕು?
ನಿಷ್ಪಕ್ಷಪಾತ, ಸತ್ಯನಿಷ್ಠತೆ, ನ್ಯಾಯಯುತ ಸುದ್ದಿಗೆ ಅತ್ಯುತ್ತಮ ಉದಾಹರಣೆ ಯಾವುದು?
ಪೆಟ್ರೋಲ್ ಡಿಸೇಲ್ ಬೆಲೆ ಗಗನಕ್ಕೇರಿದೆ ನಾವೇನು ಮಾಡಬಹುದು?

ಕಾಲ ಚಕ್ರ

ಸಮೃದ್ಧ ಸರಕಾರಕ್ಕೆ ಮೂರೇ ಗೇಣು ಎಂದು ಹಲುಬುತ್ತಿರುವ ಬಿಜೆಪಿ ಸರಕಾರ ಭಿನ್ನಮತೀಯತೆಯನ್ನು ಶಮನ ಮಾಡಿ ಶವಸಂಸ್ಕಾರ ಮಾಡುವುದಕ್ಕೆ ಏನು ಮಾಡಬೇಕು ಅನ್ನೋ ಪ್ರಶ್ನೆಗೆ ನಮ್ ನಂಜ ಹಿಂಗಂತ ಉತ್ತರಿಸವ್ನೆ ಇಲ್ಲಿ… ‘ಹಂಗಲ್ಲ ಸರ್ರ, ಕೊನಿಗೆ ನೂರಾ ಹತ್ತು ಜನಕ್ಕ ನೂರಾ ಹತ್ತು ಮಂತ್ರಿಗಳಾದ್ರೂ ಆದ್ರೆ ಆವಾಗ ಭಿನ್ನ ಮತಾನೇ ಇರಂಗಿಲ್ಲ ಏನಂತೀರಿ…’

………………………………………………………………

ಕಳೆದ ಸಂಚಿಕೆಯ ಬ್ಲಾಗ್ ಬೀಟ್

Categories: ಇತರೆ
Tagged: , , , , , ,

0 responses so far ↓

  • There are no comments yet...Kick things off by filling out the form below.

Leave a Comment