Tag Archives: ಪಂಚ್ ಲೈನ್

ಬ್ಲಾಗ್ ಬೀಟ್ 20

7 May

ಕನ್ನಡದ ಬ್ಲಾಗುಗಳ ಲೋಕದಲ್ಲಿ ವಿಡಂಬನೆ, ಫೇಕ್ ನ್ಯೂಸ್, ಕಾಲೆಳೆಯುವಿಕೆ, ನವಿರಾದ ಹಾಸ್ಯ, ವಕ್ರತುಂಡೊಕ್ತಿ ಯಾವುದಕ್ಕೂ ಕೊರತೆಯಿಲ್ಲ. ವಾರಕ್ಕೊಂದು ಬಾರಿ ಕನ್ನಡದ ಬ್ಲಾಗು ತೋಟವನ್ನು ಹೊಕ್ಕು ಅಲ್ಲಿನ ರಸವತ್ತಾದ ಬರಹಗಳನ್ನು ಹೆಕ್ಕಿ ತಂದು ಪಟ್ಟಿ ಮಾಡುವ ಕೆಲಸವನ್ನು ಒಪ್ಪಿಕೊಂಡಿದ್ದಾರೆ ನಗೆಸಾಮ್ರಾಟ್. ಇವರ ಬ್ಲಾಗ್ ಬೀಟ್‌ಗೆ ನಿಮ್ಮ ಬ್ಲಾಗೂ ಈಡಾಗಬೇಕೆಂಬ ಆಸೆಯಿದ್ದರೆ ನಿಮ್ಮ ಬ್ಲಾಗಿನ ವಿಳಾಸ ಕೊಟ್ಟು ನಮ್ಮ ವಿಳಾಸಕ್ಕೆ ಒಂದು ಮಿಂಚಂಚೆ ಕಳುಹಿಸಿ.

……………………………………………………

ಟೂನಂಗಡಿ 001

ಟೂನಂಗಡಿ ತೆರೆದು ಕೂತಿರುವ ಅಮೃತ್.ವಿ ಉದಯವಾಣಿಯಲ್ಲಿ ಪ್ರಕಟವಾದ ತಮ್ಮ ಕಾರ್ಟೂನುಗಳಲ್ಲಿ ಕೆಲವನ್ನು ಬ್ಲಾಗಿಗೆ ಹಾಕಿರುವುದು ಬೀಟ್ ಹೊರಟ ಸಾಮ್ರಾಟರ ಕಣ್ಣಿಗೆ ಬಿತ್ತು. ಹಾಗೆ ಕಣ್ಣಿಗೆ ಬಿದ್ದದ್ದನ್ನು  ಸಾವಕಾಶವಾಗಿ ಹೊರಗೆ ತೆಗೆದು ಅವರು ಇಲ್ಲಿ ಹಾಕಿದ್ದಾರೆ.

ಪಂಚ್ ಲೈನು

ಹುಡುಗಿಯರ ವಿಷಯದಲ್ಲೂ ರಾಜಕಾರಣದಲ್ಲೂ ತಲಾ ಒಂದೊಂದಾಗಿ ಪಿ.ಎಚ್.ಡಿ ಮಾಡುತ್ತಿರುವಂತೆ ಕಾಣುವ ಪಂಚ್ ಲೈನ್ ಗಣೇಶರು ಹುಡುಗಿಯರ ಮನಸ್ಸು ಗೆಲ್ಲೋದು ಚುನಾವಣೆ ಗೆಲ್ಲೋದೂ ಆಲ್ಮೋಸ್ಟ್ ಸೇಮ್ ಅಂತಾರೆ. ಹೇಗೆ ಅಂದ್ರಾ? ಇಲ್ ನೋಡಿ…

ಪುಗಸಟ್ಟೆ

ರಾಜಕೀಯದಲ್ಲಿನ ಎಡದ ಬಲ ಹಾಗೂ ಬಲದ ಎಡದ ಸುಳಿಯಲ್ಲಿ ಪುಗಸಟ್ಟೆ ಉಪದೇಶ ಕೊಡುವ ಬ್ಲಾಗಿಗರು ಒಂದು ಗಂಭೀರ ಪ್ರಶ್ನೆ ಕೇಳಿದ್ದಾರೆ. ‘ಈ ಘಟನೆ’ ಭಾರತದಲ್ಲಿ ನಡೆಯುವುದು ಯಾವಾಗ ಎಂಬುದು ಅವರ ಪ್ರಶ್ನೆ. ಇದಕ್ಕೆ ಉತ್ತರಿಸಬೇಕಾದಾವರು, ಮಾತನಾಡದೆ ಮಾಡಿ ತೋರಿಸುವವರನ್ನು ಹುಡುಕಿ ನಮ್ಮ ಚೇಲ ದೇಶಾಂತರ ಹೊರಟಿದ್ದಾನೆ.

ಬೊಗಳೆ

ಅಶಿಕ್ಷಿತರು, ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾದವರೇ ತುಂಬಿ ಹೋಗಿರುವ ರಾಜಕೀಯ ರಂಗಕ್ಕೆ ಸುಶಿಕ್ಷಿತರು ಧುಮುಕುತ್ತಿರುವ ವಿದ್ಯಮಾನದ ಸಮಗ್ರ ವರದಿಯನ್ನು ಬೊಗಳೆ ಬ್ಯೂರೋ ಪ್ರಕಟಿಸಿದೆ. ಮಾನವಿಲ್ಲದ ದಂಡ ಪಿಂಡಗಳಾದ ರಾಜಕಾರಣಿಗಳಿಗೆ ಮಾನದಂಡವನ್ನು ವಿಧಿಸುವ ಮಹೋನ್ನತ ಕಾರ್ಯಕ್ಕೆ ಕೈ ಹಾಕಿದೆ. ಅವರ ಸಾಹಸಕ್ಕೆ ಸಂತಾಪ ಸೂಚಿಸುತ್ತಾ ನಾವು ಅಲ್ಲಿಂದ ಪರಾರಿಯಾಗಿದ್ದೇವೆ.

ಮೋಟುಗೋಡೆ

ಇರುವ ಮೋಟು ಗೋಡೆಯನ್ನು ಎಗರಿ ಎಗರಿ ಜಿರಾಫೆಯಂತೆ ಎತ್ತರವಾಗಿರುವ ಮೋಟುಗೋಡೆ ಬಳಗ ಕಂಪ್ಯೂಟರ್ ಕರ್ಮಕಾಂಡವನ್ನು ವರದಿ ಮಾಡಿದೆ. ರಿಸೆಷನ್ ಸಮಯದಲ್ಲಿ ಎಲ್ಲರನ್ನೂ ಕಾಡುತ್ತಿರುವ ಕಂಪ್ಯೂಟರ್ ಕರ್ಮ ಕಾಂಡವಲ್ಲ ಇದು. ಇದು ಮೋಟುಗೋಡೆಯ ಸ್ಪೆಷಲ್ ‘ಡಿಕ್’ಆಕ್ಷನ್!

ಮಜಾವಾಣಿ

ಮಜಾವಾಣಿ ಪತ್ರಿಕೆ ಈಗ ಮೈತುಂಬಿಕೊಂಡು ನಿಂತಿದೆ. ಅಗ್ರ ರಾಷ್ಟ್ರೀಯ ವಾರ್ತೆಯಿಂದ ಹಿಡಿದು ವಿಶೇಷ ಸಂದರ್ಶನದವರೆಗೆ ಎಲ್ಲಾ ವಿಭಾಗಗಳಲ್ಲೂ ನೈಪುಣ್ಯತೆ ಮೆರೆದಿದೆ.

ಈ ಸಂಚಿಕೆಯಲ್ಲಿ ಹಿನ್ನೆಲೆ ಕೆಮ್ಮು ಕಲಾವಿದ ದಮ್ಮುಲ ಕೃಷ್ಣಪ್ಪನವರ ಅಪರೂಪದ ಸಂದರ್ಶವನ್ನು ಪ್ರಕಟಿಸಲಾಗಿದೆ. ಕೆಮ್ಮಾಭಿಮಾನಿಗಳು ಹಾಗೂ ದಮ್ಮಾಭಿಮಾನಿಗಳು ಅವಶ್ಯಕವಾಗಿ ಓದಲೇಬೇಕಾದ ಸಂದರ್ಶನವಿದು.

ಬ್ಲಾಗ್ ಬೀಟ್ 17

2 Feb

ಕನ್ನಡದ ಬ್ಲಾಗುಗಳ ಲೋಕದಲ್ಲಿ ವಿಡಂಬನೆ, ಫೇಕ್ ನ್ಯೂಸ್, ಕಾಲೆಳೆಯುವಿಕೆ, ನವಿರಾದ ಹಾಸ್ಯ, ವಕ್ರತುಂಡೊಕ್ತಿ ಯಾವುದಕ್ಕೂ ಕೊರತೆಯಿಲ್ಲ. ವಾರಕ್ಕೊಂದು ಬಾರಿ ಕನ್ನಡದ ಬ್ಲಾಗು ತೋಟವನ್ನು ಹೊಕ್ಕು ಅಲ್ಲಿನ ರಸವತ್ತಾದ ಬರಹಗಳನ್ನು ಹೆಕ್ಕಿ ತಂದು ಪಟ್ಟಿ ಮಾಡುವ ಕೆಲಸವನ್ನು ಒಪ್ಪಿಕೊಂಡಿದ್ದಾರೆ ನಗೆಸಾಮ್ರಾಟ್. ಇವರ ಬ್ಲಾಗ್ ಬೀಟ್‌ಗೆ ನಿಮ್ಮ ಬ್ಲಾಗೂ ಈಡಾಗಬೇಕೆಂಬ ಆಸೆಯಿದ್ದರೆ ನಿಮ್ಮ ಬ್ಲಾಗಿನ ವಿಳಾಸ ಕೊಟ್ಟು ನಮ್ಮ ವಿಳಾಸಕ್ಕೆ ಒಂದು ಮಿಂಚಂಚೆ ಕಳುಹಿಸಿ.

……………………………………………………

 

ವಾರೆ ಕೋರೆ ಬಿಡುಗಡೆ

ಜಗತ್ತಿನಾದ್ಯಂತ ಭಾರಿ ಕುತೂಹಲ ಉಂಟು ಮಾಡಿದ್ದ ಕನ್ನಡ ಹಾಸ್ಯ ಪತ್ರಿಕೆ ವಾರೆ ಕೋರೆ ಬಿಡುಗಡೆಯಾಯಿತು. ಕನ್ನಡ ನಾಡಿನಲ್ಲಿ ತುಂಟರಗಾಳಿಯನ್ನು ಎಬ್ಬಿಸಲು ಸಂಕಲ್ಪ ತೊಟ್ಟಿರುವ ಪ್ರಕಾಶ್ ಶೆಟ್ಟಿಯವರಿಗೆ ಅಭಿನಂದನೆಗಳು.

 

ಪತ್ರಿಕೆ ಬಿಡುಗಡೆಯ ಫೊಟೊ… ನಿದ್ರೇವೇಗೌಡರ ಅ‘ಮೃತ’ ಹಸ್ತದಿಂದ ಪತ್ರಿಕೆ ಬಿಡುಗಡೆ

KPN photo

ಬಿಡುಗಡೆ ಕಾರ್ಯಕ್ರಮದ ವರದಿ…

press

 

ಬೊಗಳೆ ರಗಳೆ

ವಸ್ತುನಿಷ್ಠ ಹಾಗೂ ವ್ಯಕ್ತಿ ಕಷ್ಟ ವರದಿಗಾರಿಕೆಯಲ್ಲಿ ಎತ್ತಿದ ಕೈ ಎಂಬ ಕುಖ್ಯಾತಿಯನ್ನು ಸಂಪಾದಿಸಿ ಸುಸ್ತಾಗಿರುವ ಬೊಗಳೆ ರಗಳೆ ಬ್ಯೂರೋ ಬೇರೆಲ್ಲಾ ಪತ್ರಿಕೆಗಳು ವರದಿ ಮಾಡದ ಸುದ್ದಿಗಳನ್ನು ವರದಿ ಮಾಡುವ ಕಾಯಕವನ್ನು ಮುಂದುವರೆಸಿದೆ.

ಕರುನಾಟಕದ ಅಮುಖ್ಯಮಂತ್ರಿಯವರು ಬೆಳಗಿನ ಉಪಹಾರಕ್ಕೆ ಇಡ್ಲಿ ವಡೆಯನ್ನು ತಿನ್ನುತ್ತಾರೆ ಎಂಬ ಸುದ್ದಿಯನ್ನು ಬೆನ್ನತ್ತಿ ವಿಸ್ತೃತವಾದ ವರದಿಯನ್ನು ಮಾಡಿದ್ದಾರೆ.

“ರಾಜ್ಯದ ಅಮುಖ್ಯಮಂತ್ರಿಗಳು ಬೆಳಗ್ಗಿನ ಉಪಾಹಾರಕ್ಕೆ ಇಡ್ಲಿ ವಡೆ ತಿನ್ನುತ್ತಾರೆ ಎಂದು ವರದ್ದಿಯಾಗಿರುವುದು ತನಿಖೆಗೆ ಅರ್ಹ ಎಂದು ಬೊಗಳೂರು ಓದುಗರೆಲ್ಲರೂ ಪ್ರತಿಭಟನೆ ಮಾಡಿರುವುದರಿಂದ ಒತ್ತಡಕ್ಕೆ ಮಣಿದ ನಮ್ಮ ಅನ್ವೇಷಣಾ ಬ್ಯುರೋ, ರದ್ದಿಗಾರರನ್ನು ಅಟ್ಟಾಡಿಸಿ ಕಳುಹಿಸಿತು.”

ಸುದ್ದಿಗೆ ಸಂಬಂಧ ಪಟ್ಟವರು ಪಡವರು ಹೀಗೆ ಯಾರ್ಯಾರನ್ನೆಲ್ಲಾ ಹಿಡಿದು ಸುದ್ದಿಯನ್ನು ಪಡೆಯಬೇಕು ಎಂಬುದಕ್ಕೆ ಯುವ ಉತ್ಸಾಹಿ ಪತ್ರಿಕೋದ್ಯಮದ ವಿದ್ಯಾರ್ಥಿನಿಯರಿಗೆ ಈ ವರದಿ ದಾರಿ ದೀಪವಾಗಲಿದೆ.

 

ಪಂಚ್ ಲೈನ್

ಓದುಗರನ್ನು ಗಾಬರಿ ಪಡಿಸುವುದಕ್ಕಾಗಿಯೋ ಇಲ್ಲವೇ ಓಡಿಸುವುದಕ್ಕಾಗಿಯೋ ಹೊಸ ಹೊಸ ಅವತಾರಗಳನ್ನೆತ್ತುವೆ ಎಂದು ವೀರ ಪ್ರತಿಜ್ಞೆ ಮಾಡಿರುವ ಪಂಚ್ ಲೈನ್ ಧೀರ ಗಣೇಶರು ಪರೀಕ್ಷೆಯ ನಂತರ ಪಂಚ್ ಲೈನಿಗೆ ಮರಳುವುದಾಗಿ ಮಾತು ಕೊಟ್ಟಿದ್ದರು. ಆದರೆ ವೇದಿಕೆಯ ಮೇಲೆ ನಾಟಕದ ಡೈಲಾಗಿನ ಪಂಚನ್ನೂ, ಲೈನನ್ನೂ ಮರೆತಂತೆ ಬ್ಲಾಗನ್ನು ಮರೆತಿರುವ ಹಾಗಿದೆ. ಅವರಿಗೆ ಈ ಮೂಲಕ ಸಾಮ್ರಾಟರುನ ನೆನಪಿಸುವುದೆಂದರೆ, ಮಾತು ಉಳಿಸಿಕೊಳ್ಳದಿದ್ದ ಆ ಶ್ರೀಕೃಷ್ಣನನ್ನೇ ಜನರು ಮರೆತು ‘ದೇವರಿದ್ದಾನಾ?’ ಎಂದು ಪ್ರಶ್ನಿಸುತ್ತಿದ್ದಾರೆ, ಇನ್ನು ಅವರಂತಹ ಹುಲುಮಾನವರ ಗತಿ ಏನು? ಆದಷ್ಟು ಬೇಗ ಗಣೇಶ್ ಪಂಚಿನ ಮೇಲೆ ಪಂಚುಗಳನ್ನು ರವಾನಿಸಲಿ ಎಂಬುದು ನಮ್ಮ ಅಶಯ.

 

ಮಜಾವಾಣಿ

ಎಲ್ಲಿ ಬೇಲಿಗಿಲ್ಲವೋ ಅರಿವು, ಎಲ್ಲಿ ಗಾಳಿಗಿಲ್ಲವೋ ಭಯವೂ, ಎಲ್ಲಿಲ್ಲವೋ ಸತ್ಯದ ಸುಳಿವು ಅಲ್ಲಿ ನಾವಿರುತ್ತೇವೆ ಎಂದು ಅಭಯ ನೀಡಿರುವ ಮಜಾವಾಣಿಯ ಸಂಪಾದ ಮಹಾಶಯರು ವಾಣಿಯನ್ನು ಮರೆತು ‘ಮಜಾ’ ಮಾಡುತ್ತಿರುವಂತಿದೆ ಎಂದು ಸಾಮ್ರಾಟರು ಗಡ್ಡ ಬೋಳಿಸುವ ಸಂಸ್ಥೆಯ ನೌಕರರು ಆಡಿಕೊಳ್ಳುತ್ತಿದ್ದಾರೆ.

ಬ್ಲಾಗ್ ಸ್ಪಾಟಿನಿಂದ ಫೇರಿಕಿತ್ತ ಮೇಲೆ ಮಜಾವಾಣಿ ಸೊರಗಿದೆಯೇ ಎಂಬ ಬಗ್ಗೆ ಲೋಕಾಯುಕ್ತ ತನಿಖೆಯನ್ನೂ, ಮಜಾವಾಣಿಯ ಸಂಪಾದಕರು ಪತ್ರಿಕಾ ಧರ್ಮ ಮೆರೆಯುವುದಕ್ಕೆ ಮಂಗಳೂರಿನ ಕಡೆಯ ಅಮ್ನೇಶಿಯಾ ಪ್ರವೇಶಿಸಿ ದಿವಂಗತರಾದರೋ ಎಂಬುದನ್ನು ಪತ್ತೆಹಚ್ಚಲು ನಮ್ಮ ಚೇಲ ಕುಚೇಲನ ತನಿಖೆಯನ್ನು ನಾವು ಆದೇಶಿಸಿದ್ದೇವೆ.

ಬ್ಲಾಗ್ ಬೀಟ್ 17

18 Nov

ಕನ್ನಡದ ಬ್ಲಾಗುಗಳ ಲೋಕದಲ್ಲಿ ವಿಡಂಬನೆ, ಫೇಕ್ ನ್ಯೂಸ್, ಕಾಲೆಳೆಯುವಿಕೆ, ನವಿರಾದ ಹಾಸ್ಯ, ವಕ್ರತುಂಡೊಕ್ತಿ ಯಾವುದಕ್ಕೂ ಕೊರತೆಯಿಲ್ಲ. ವಾರಕ್ಕೊಂದು ಬಾರಿ ಕನ್ನಡದ ಬ್ಲಾಗು ತೋಟವನ್ನು ಹೊಕ್ಕು ಅಲ್ಲಿನ ರಸವತ್ತಾದ ಬರಹಗಳನ್ನು ಹೆಕ್ಕಿ ತಂದು ಪಟ್ಟಿ ಮಾಡುವ ಕೆಲಸವನ್ನು ಒಪ್ಪಿಕೊಂಡಿದ್ದಾರೆ ನಗೆಸಾಮ್ರಾಟ್. ಇವರ ಬ್ಲಾಗ್ ಬೀಟ್‌ಗೆ ನಿಮ್ಮ ಬ್ಲಾಗೂ ಈಡಾಗಬೇಕೆಂಬ ಆಸೆಯಿದ್ದರೆ ನಿಮ್ಮ ಬ್ಲಾಗಿನ ವಿಳಾಸ ಕೊಟ್ಟು ನಮ್ಮ ವಿಳಾಸಕ್ಕೆ ಒಂದು ಮಿಂಚಂಚೆ ಕಳುಹಿಸಿ.

……………………………………………………..

ಬೊಗಳೆ ರಗಳೆ

ಕೈ ಪಕ್ಷದಲ್ಲಿ ಟಿಕೇಟುಗಳು ಬಿಕರಿಯಾಗುತ್ತಿವೆ ಎಂಬ ಸತ್ಯವನ್ನು ಜಗಜ್ಜಾಹೀರು ಮಾಡಿ ಪಕ್ಷದಿಂದ ಗೇಟ್ ಪಾಸ್ ಪಡೆದರು ಮಾರ್ಗರೇಟ್ ಆಳ್ವಾ. ಟಿಕೆಟುಗಳು ಎಲ್ಲೆಲ್ಲಿ ಯಾವ ಬೆಲೆಗೆ ಮಾರಾಟವಾಗುತ್ತಿವೆ ಎಂಬುದನ್ನು ಪತ್ತೆ ಹಚ್ಚುವುದಕ್ಕಾಗಿ ಕಾಂಗೈ ಪಾರ್ಟಿಯವರು ಬೊಗಳೆ ರಗಳೆಯ ಅಸತ್ಯ ಅನ್ವೇಷಿಯವರನ್ನು ತನಿಖೆ ಮಾಡಲು ಕೋರಿಕೊಂಡರಂತೆ. ಅವರ ವರದಿ ಇಲ್ಲಿದೆ. ನಮ್ಮ ಜಗದ್ವಿಖ್ಯಾತ ಡಿಟೆಕ್ಟಿವ್ ಕುಚೇಲನ ಕಣ್ತಪ್ಪಿಸಿ ಈ ಕೇಸು ಅಸತ್ಯ ಅನ್ವೇಷಿಯವರ ಪಾಲಾದದ್ದು ಹೇಗೆ ಎನ್ನುವುದನ್ನು ಪತ್ತೆ ಹಚ್ಚುವುದಕ್ಕೆ ಸಾಮ್ರಾಟರು ಒಂದು ತನಿಖಾ ಮಂಡಳಿ ರಚಿಸುವಲ್ಲಿ ಬ್ಯುಸಿಯಾಗಿದ್ದಾರೆ.

ಪಂಚ್ ಲೈನ್

ಚಿತ್ರ ವಿಚಿತ್ರ ಪಂಚುಗಳನ್ನು ಓದುಗರೆಡೆಗೆ ರವಾನಿಸುವಲ್ಲಿ ಜಗತ್ವಿಖ್ಯಾತರಾಗಿರುವ ಗಣೇಶರು ಇತ್ತೀಚೆಗೆ ಹುಡುಗ ಹುಡುಗಿಯರ ನಡುವಿನ ಕೆಮಿಸ್ಟ್ರಿ, ಬಯಲಾಜಿ, ಫಿಸಿಕ್ಸು, ಲಾಜಿಕ್ಕು, ಮ್ಯಾಥಮ್ಯಾಟಿಕ್ಸುಗಳಲ್ಲಿ ಆಸಕ್ತಿ ತಳೆದಿರುವಂತಿದೆ.
ಇತ್ತೀಚಿನ ಅವರ ಪಂಚುಗಳೇ ಅದಕ್ಕೆ ಸಾಕ್ಷಿ:
ಹುಡುಗಿಯರೆಂದರೆ ಯಾರು?
ಗೊತ್ತಾಗದ ಪ್ರಶ್ನೆ… ಹುಡುಗರು ಹುಡುಗೀರು ಏನು ಮಾಡ್ತಾರೆ?

ಪ್ರಕಾಶ್ ಶೆಟ್ಟಿ ಪಂಚ್

ಪ್ರಕಾಶ್ ಶೆಟ್ಟಿಯವರು ಓರೆ ಕೋರೆಯ ತಯಾರಿಯಲ್ಲಿ ಫುಲ್ ಬ್ಯುಸಿಯಾಗಿರುವಂತಿದೆ. ಅವರ ಬ್ಲಾಗು ಅವರ ಗೆರೆಗಳ ಪಂಚಿಲ್ಲದೆ ಪೇಲವವಾಗಿದೆ.
ಶೀಘ್ರದಲ್ಲಿಯೇ ತಮ್ಮ ಬ್ಲಾಗಿನಲ್ಲಿ ತಮ್ಮ ಪತ್ರಿಕೆಯ ಪ್ರಾಯೋಗಿಕ ಪ್ರತಿಯನ್ನು ಪ್ರಕಟಿಸುತ್ತೇವೆ ಎಂದು ಪ್ರಾಮಿಸ್ ಮಾಡಿರುವ ಶೆಟ್ಟಿಯವರು ನಗೆ ಸಾಮ್ರಾಟರನ್ನು ತುದಿಗಾಲಲ್ಲಿ ನಿಲ್ಲುವಂತೆ ಮಾಡಿದ್ದಾರೆ. ಅಲ್ಲದೆ ಪ್ರಕಾಶ್ ಶೆಟ್ಟಿಯವರು ಗೌಡರನ್ನು ನಗಿಸುವ ಶಪತ ಕೈಗೊಂಡಿರುವುದರಿಂದ ಸಾಮ್ರಾಟರ ಚೇಲ ಕುಚೇಲ ಗೌಡರು ನಗುತ್ತಾರೋ ಇಲ್ಲವೇ ಕಂಪ್ಯೂಟರಿನಲ್ಲಿ ನಗುವಂತೆ ಗ್ರಾಫಿಕ್ಸ್ ಮಾಡಲಾಗುತ್ತದೆಯೋ ಎಂದು ಪತ್ತೇ ಹಚ್ಚಲು ತಯಾರಾಗಿ ನಿಂತಿದ್ದಾನೆ.

ಕೆಂಡಸಂಪಿಗೆಯ ಸುದ್ದಿ ಕ್ಯಾತ

ಸತ್ತ ನಂತರ ನಿಮ್ಮ ಚಿತಾ ಭಸ್ಮವನ್ನು ಚಂದ್ರನಲ್ಲಿಗೆ ತೆಗೆದುಕೊಂಡು ಹೋಗುವ ಯೋಜನೆಯನ್ನು ಕಂಪೆನಿಯೊಂದು ಹಾಕಿಕೊಂಡಿದ್ದು ಸುದ್ದಿ ಕ್ಯಾತರು ಕರ್ನಾಟಕದಲ್ಲಿನ ಕಾಂಟ್ರ್ಯಾಕ್ಟನ್ನು ಗಿಟ್ಟಿಸಿಕೊಂಡಿದ್ದಾರೆ.
ಮುಂದಿನದನ್ನು ಅವರ ಮಾತಲ್ಲೇ ಕೇಳಿ:  “
ಸಾಯುವ ಮೊದಲು ಬುಕ್ಕಿಂಗ್ ಮಾಡಿಸಿದರೆ ರಿಯಾಯತಿ ಕೂಡ ಲಭ್ಯವಿದೆ. ಸತ್ತ ನಂತರ ಅಡ್ರೆಸ್ ಇಲ್ಲದ ಆತ್ಮಗಳಾಗಿ ಈ ಭೂಮಿಯಲ್ಲಿ ಅಲೆಯುವ ಬದಲು ನೇರವಾಗಿ ಸ್ವರ್ಗವನ್ನು ಸೇರಿಸಿಕೊಳ್ಳಲು ಈ ಯೋಜನೆಯ ಸದುಪಯೋಗ ಯಾಕೆ ಪಡೆದುಕೊಳ್ಳಬಾರದು. ಆಸಕ್ತರು ಮೇಲ್ಕಾಣಿಸಿದ ವಿವರಗಳೊಂದಿಗೆ ಮುಂಗಡ ಬುಕ್ಕಿಂಗ್ ಗಾಗಿ ಸುದ್ದಿಕ್ಯಾತರನ್ನು ಸಂಪರ್ಕಿಸಬಹುದು.”
ಸಾಮ್ರಾಟರು ಈಗಾಗಲೇ ಮುಂಗಡ ಬುಕ್ಕಿಂಗ್ ಮಾಡಿಸಿಯಾಗಿದೆ, ಎಷ್ಟಾದರೂ ಒಮ್ಮೆ ಆತ್ಮಹತ್ಯೆ ಮಾಡಿಕೊಂಡು ಪುನರ್ಜನ್ಮ ಪಡೆದು ಬಂದವರಲ್ಲವೇ? ಅನುಭವ ಹೆಚ್ಚು!

ಬ್ಲಾಗ್ ಬೀಟ್ 16

25 Oct

ಕನ್ನಡದ ಬ್ಲಾಗುಗಳ ಲೋಕದಲ್ಲಿ ವಿಡಂಬನೆ, ಫೇಕ್ ನ್ಯೂಸ್, ಕಾಲೆಳೆಯುವಿಕೆ, ನವಿರಾದ ಹಾಸ್ಯ, ವಕ್ರತುಂಡೊಕ್ತಿ ಯಾವುದಕ್ಕೂ ಕೊರತೆಯಿಲ್ಲ. ವಾರಕ್ಕೊಂದು ಬಾರಿ ಕನ್ನಡದ ಬ್ಲಾಗು ತೋಟವನ್ನು ಹೊಕ್ಕು ಅಲ್ಲಿನ ರಸವತ್ತಾದ ಬರಹಗಳನ್ನು ಹೆಕ್ಕಿ ತಂದು ಪಟ್ಟಿ ಮಾಡುವ ಕೆಲಸವನ್ನು ಒಪ್ಪಿಕೊಂಡಿದ್ದಾರೆ ನಗೆಸಾಮ್ರಾಟ್. ಇವರ ಬ್ಲಾಗ್ ಬೀಟ್‌ಗೆ ನಿಮ್ಮ ಬ್ಲಾಗೂ ಈಡಾಗಬೇಕೆಂಬ ಆಸೆಯಿದ್ದರೆ ನಿಮ್ಮ ಬ್ಲಾಗಿನ ವಿಳಾಸ ಕೊಟ್ಟು ನಮ್ಮ ವಿಳಾಸಕ್ಕೆ ಒಂದು ಮಿಂಚಂಚೆ ಕಳುಹಿಸಿ.

……………………………………………………..

ಸಾಮ್ರಾಟರ ಅಕಾಲಿಕ ಮರಣದಿಂದ ಬ್ಲಾಗ್ ಲೋಕದಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿ ಬಿಡುತ್ತದೆ. ಪ್ರತಿ ಹದಿನೈದು ದಿನಗಳಿಗೊಮ್ಮೆ ಬೀಟಿಗೆ ಸಾಮ್ರಾಟರು ಬರುತ್ತಿಲ್ಲ ಎಂಬುದನ್ನು ತಿಳಿದು ಬ್ಲಾಗಿಗ ಮಹಾಶಯರು ಇಲ್ಲ ಸಲ್ಲದ ತಂಟೆ ತಕರಾರು ತೆರೆದುಕೊಳ್ಳುತ್ತಾರೆ ಎಂದೆಲ್ಲಾ ಭಾವಿಸಿದ್ದ ಸಾಮ್ರಾಟರ ಅತೃಪ್ತ ಆತ್ಮಕ್ಕೆ ತಕ್ಕ ಪಾಠ ಸಿಕ್ಕಿದೆ. ಅಜ್ಜಿಯ ಕೋಳಿ ಕೂಗದಿದ್ದರೆ ಬೆಳಕೇ ಹರಿಯುವುದಿಲ್ಲ ಎಂಬುದನ್ನು ಅಕ್ಷರಶಃ ನಂಬಿಕೊಂಡಿದ್ದ ಸಾಮ್ರಾಟರು ಈಗ ಸದ್ದಿಲ್ಲದೆ ಅಜ್ಜಿಯ ಕೈಲಿದ್ದ ಕೋಳಿಯ ಕತ್ತು ಸೀಳಿ ಆ ಅಜ್ಜಿಯ ಕೈಲೇ ಮಸಾಲೆ ಅರೆಸುತ್ತಿದ್ದಾರೆ!

…………………………

ಪ್ರಕಾಶ್ ಶೆಟ್ಟಿಯವರದು ಬರೇ ವಾರೆ ಕೋರೆ

ತಮ್ಮ ವಾರೇ ಕೋರೆ ಗೆರೆಗಳಿಂದ ನಾಡಿನ ಉದ್ದಗಲಕ್ಕೆ ಚಿರಪರಿಚಿತರಾಗಿರುವ ಪ್ರಕಾಶ್ ಶೆಟ್ಟಿಯವರು ಬಹುದೊಡ್ಡ ಸಾಹಸಕ್ಕೆ ಕೈ ಹಾಕಿದ್ದಾರೆ. ಅವರ ಈ ಸಾಧನೆ ಗಿನ್ನಿಸ್ ದಾಖಲೆಯ ಪುಸ್ತಕದಲ್ಲೇ ಶ್ರೇಷ್ಠ ಮಟ್ಟದ ಸ್ಥಾನಮಾನವನ್ನು ಪಡೆಯಲಿದೆ ಎಂದು ಗುಸುಗುಸು ಶುರುವಾಗಿದೆ. ಅಸಲಿಗೆ ಇವರು ಮಾಡಲು ಹೊರಟಿರುವುದಾದರೂ ಏನನ್ನು? ‘ದೇವೇಗೌಡರನ್ನು ನಗಿಸಲು ಹೊರಟಿದ್ದಾರೆ!’

ಇಲ್ಲಿ ನೋಡಿ…

ಹೌದು, ಪ್ರಕಾಶ್ ಶೆಟ್ಟಿಯವರು ಕನ್ನಡದಲ್ಲಿ ಒಂದು ಹಾಸ್ಯ ಮಾಸ ಪತ್ರಿಕೆಯನ್ನು ತೆರೆಯುತ್ತಿದ್ದಾರಂತೆ. ಗೌಡರನ್ನು, ಖರ್ಗೆಯವರನ್ನು ನಗಿಸುವ ಹುಮ್ಮಸ್ಸಿರುವ ಶೆಟ್ಟಿಯವರ ಪಂಚ್‌ನ್ನು ಕನ್ನಡಿಗರು ಸಕತ್ತಾಗಿ ಸ್ವೀಕರಿಸಲಿ ಎಂಬುದು ಸಾಮ್ರಾಟರ ಹಾರೈಕೆ.

…………………………

ಆಚಾರ್ಯರಿಗೆ ಸ್ವಲ್ಪ ಬೇಜಾರಾಗುತ್ತದೆಯಂತೆ!

ತಮ್ಮನ್ನು ಹೋಂ ಮಿನಿಸ್ಟರ್ ಎಂದು ಕನಿಕರದಿಂದ, ಲೇವಡಿಯಿಂದ, ಮಮತೆಯಿಂದ ಕರೆಯುವುದರ ಬಗ್ಗೆ ಅಷ್ಟಾಗಿ ತಲೆ ಕೆಡಿಸಿಕೊಳ್ಳದ ಆಚಾರ್ಯರು ಇಷ್ಟೆಲ್ಲಾ ಆದರೂ ಇದರಿಂದ ಸ್ವಲ್ಪ ಬೇಜಾರಾಗುತ್ತದೆ ಎಂದು ಹೇಳಿದ್ದು ನಾಡಿನ ಹೆಸರಾಂತ ಪತ್ರಿಕೆ ಮಜಾವಾಣಿಯಲ್ಲಿ ವರದಿಯಾಗಿದೆ.

ಹಾಗೆಯೇ ನಮ್ಮ ಮಾನ್ಯ ಮುಖ್ಯ ಮಂತ್ರಿಯವರು ಅಮೇರಿಕಾದ ಅಕ್ಕನ ಸಮಾರಂಭಕ್ಕೆ ಹೋಗಿ ಆಂಗ್ಲ ರಾಜಕಾರಣಿಗೆ ಉಚಿತವಾಗಿ ಲೋಟಸ್ ಫ್ಲವರ್ ಆಪರೇಷನ್ ಮಾಡಿದ ಸಂಗತಿ ಸಚಿತ್ರ ವರದಿ ಮಜಾವಾಣಿಯಲ್ಲಿ ಪ್ರಕಟವಾಗಿದೆ.

…………………………

ಬೊಗಳೆ ದಿವಾಳಿ ವಿಶೇಷಾಂಕ

ರಾಜ್ಯದ ಪ್ರತಿಯೊಂದು ಪತ್ರಿಕೆಯೂ ತಾನು ಬದುಕಿದ್ದೇನೆ ಎಂಬುದನ್ನು ಸಾಬೀತು ಪಡಿಸುವುದಕ್ಕಾಗಿಯೇ ದೀಪಾವಳಿಯಂದು ವಿಶೇಷಾಂಕದ ಹೆಸರಿನಲ್ಲಿ ಒಂದೇ ಆಕಾರದ, ಒಂದೇ ತೂಕದ, ಒಂದೇ ಬೆಲೆಯ ಒಂದಷ್ಟು ಸರಕನ್ನು ದಾಟಿಸಿ ಕೈತೊಳೆದುಕೊಂಡುಬಿಡುತ್ತವೆ.

ಈ ರೇಸಿನಲ್ಲಿ ತಾನೇನೂ ಕಡಿಮೆ ಇಲ್ಲ ಎಂದು ಬೊಗಳೆ ರಗಳೆಯ ಏಕಸದಸ್ಯ ಬ್ಯೂರೋದ ಸಮಸ್ತ ಸಿಬ್ಬಂದಿ ಟೊಂಕ ಕಟ್ಟಿ ನಿಂತು ದಿವಾಳಿ ವಿಶೇಷಾಂಕವನ್ನು ಹೊರತಂದಿದ್ದಾರೆ. ಅವರು ಈ ಸಂಚಿಕೆಯನ್ನು ಹೊರತಂದಿದ್ದಕ್ಕಾಗಿ ಹಾಗೂ ಅದನ್ನು ಮಾರುಕಟ್ಟೆಗೆ ಬಿಡುಗಡೆ ಮಾಡದೆ ಕೃಪೆ ಮಾಡಿದ್ದಕ್ಕಾಗಿ ಸಾಮ್ರಾಟರಿಂದ ಅಭಿನಂದೆಗಳ ಠುಸ್ ಪಟಾಕಿಯನ್ನು ಪಡೆದಿದ್ದಾರೆ.

(ಇವರ ಉಚಾವಣೆಯಿಂದ ಸಾಮ್ರಾಟರೂ ಸಹ ನಗೆ ನಗಾರಿ ದೀಪಾವಳಿ ವಿಶೇಷಾಂಕ ತರುವ ಸನ್ನಾಹದಲ್ಲಿದ್ದಾರೆ ಎಂಬುದು ಕೇವಲ ಊಹಾಪೋಹದ ಆಧಾರದಲ್ಲಿ ರೂಪುಗೊಂಡಿರುವ ವಾಸ್ತವ ಸಂಗತಿ ಎಂದು ತಿಳಿಸುತ್ತಿದ್ದೇವೆ.)

…………………………

ಪಂಚುಗಳು

ತುಂಬಾ ದಿನಗಳಿಂದ ಬ್ಲಾಗ್ ಲೋಕದಿಂದ ಗಣೇಶರು ನಾಪತ್ತೆಯಾಗಿ ಅನಂತರ ಸಾಮ್ರಾಟರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ವಾರ್ತೆಯೂ ವರದಿಯಾಗಿ ಜನರು ಅನವಶ್ಯಕವಾದ ಸಂಶೋಧನೆಗಳನ್ನು ಮಾಡಲು ಶುರು ಮಾಡತೊಡಗಿದಾಗಲೇ ಗಣೇಶರು ಪ್ರತ್ಯಕ್ಷರಾಗಿ ಒಂದೆರಡು ಪಂಚು ಕೊಟ್ಟು ಮಾಯವಾಗಿದ್ದಾರೆ.

ಅವರು ಕೊಟ್ಟ ಪಂಚಿನ ಅರ್ಥ ಸಾಮ್ರಾಟರಿಗೆ ಸಿಕ್ಕದೆ ಅದನ್ನು ಹುಡುಕಿ ಅಲೆಯುತ್ತಿದ್ದಾರೆ. ಯಾರಿಗಾದರೂ ಸಿಕ್ಕಿದರೆ ಶೇ ಐವತ್ತನ್ನು ತಮ್ಮತ್ತ ತಳ್ಳಲು ಮನವಿ ಮಾಡಿಕೊಂಡಿದ್ದಾರೆ!

ಬ್ಲಾಗ್ ಬೀಟ್ 14

1 Sep

ಕನ್ನಡದ ಬ್ಲಾಗುಗಳ ಲೋಕದಲ್ಲಿ ವಿಡಂಬನೆ, ಫೇಕ್ ನ್ಯೂಸ್, ಕಾಲೆಳೆಯುವಿಕೆ, ನವಿರಾದ ಹಾಸ್ಯ, ವಕ್ರತುಂಡೊಕ್ತಿ ಯಾವುದಕ್ಕೂ ಕೊರತೆಯಿಲ್ಲ. ವಾರಕ್ಕೊಂದು ಬಾರಿ ಕನ್ನಡದ ಬ್ಲಾಗು ತೋಟವನ್ನು ಹೊಕ್ಕು ಅಲ್ಲಿನ ರಸವತ್ತಾದ ಬರಹಗಳನ್ನು ಹೆಕ್ಕಿ ತಂದು ಪಟ್ಟಿ ಮಾಡುವ ಕೆಲಸವನ್ನು ಒಪ್ಪಿಕೊಂಡಿದ್ದಾರೆ ನಗೆಸಾಮ್ರಾಟ್. ಇವರ ಬ್ಲಾಗ್ ಬೀಟ್‌ಗೆ ನಿಮ್ಮ ಬ್ಲಾಗೂ ಈಡಾಗಬೇಕೆಂಬ ಆಸೆಯಿದ್ದರೆ ನಿಮ್ಮ ಬ್ಲಾಗಿನ ವಿಳಾಸ ಕೊಟ್ಟು ನಮ್ಮ ವಿಳಾಸಕ್ಕೆ ಒಂದು ಮಿಂಚಂಚೆ ಕಳುಹಿಸಿ.

……………………………………………………..

ಮಜಾವಾಣಿ ಪಲಾಯನ

ಬ್ಲಾಗ್ ಸ್ಪಾಟಿನ ಅಂಗಳದಿಂದ ಮಜಾವಾಣಿ ಎಂಬ ವಸ್ತು ನಿಷ್ಟ ಪತ್ರಿಕೆ ಪಲಾಯನ ಗೈದಿದ್ದು ಇದರಲ್ಲಿ ನಮ್ಮ ಕೈವಾಡವೇನೂ ಇಲ್ಲ ಎಂದು ಬೊಗಳೆ ಬ್ಯೂರೋ ನೀಡಿದ ಸ್ಪಷ್ಟನೆ ಎಲ್ಲೂ ಪ್ರಕಟವಾಗಿಲ್ಲ.
ತನ್ನದೇ ಆದ ತಾಣವನ್ನು ತೆರೆದುಕೊಂಡು ಸಂಪದದ ಶಾಮಿಯಾನದಲ್ಲಿ ಅಂಗಡಿ ತೆರೆದಿರುವ ‘ಮಜಾವಾಣಿ’ ತನ್ನ ಪ್ರತಿಸ್ಪರ್ಧಿ ಪತ್ರಿಕೆಗಳಿಗಿಂತ ಗಾವುದ ದೂರ ಓಡಿ ತನಗೆ ಉಸೇನ್ ಬೋಲ್ಟ್ ಆದರ್ಶ ಎಂಬುದನ್ನು ಸಾಬೀತು ಪಡಿಸಿದೆ. ಇಷ್ಟೇ ವೇಗವಾಗಿ ಓಡುತ್ತಿದ್ದರೆ ಪ್ರತಿಸ್ಪರ್ಧಿಗಳು ಮುನಿಸಿಕೊಂಡು ರೇಸಿನಿಂದಲೇ ಹಿಂದಕ್ಕೆ ಸರಿಯಬಹುದು ಎಂಬ ಎಚ್ಚರಿಕೆಯನ್ನು ನಗೆಸಾಮ್ರಾಟರು ರವಾನಿಸಿದ್ದಾರೆ!

ಬೊಗಳೆ

ಬ್ಲಾಗು ಎಂಬುದನ್ನು ಕನ್ನಡದಲ್ಲಿ ಏನೆಂದು ಕರೆಯಬೇಕು ಎಂಬುದಕ್ಕೆ ಉತ್ತಮವಾದ ಜನಾಭಿಪ್ರಾಯವನ್ನು ಮೂಡಿಸುವಲ್ಲಿ, ಜನರ ಕೆನ್ನೆಗೆ ಬೆಣ್ಣೆ ತಿಕ್ಕಿ ತಮ್ಮ ಪತ್ರಿಕೆಯ ಹೆಸರೇ ಅದಕ್ಕೆ ಸೂಚಿತವಾಗುವಂತೆ ಮಷ್ಕಿರಿ ಮಾಡುವಲ್ಲಿ ಅಸತ್ವ ಅನ್ವೇಷಿಗಳು ಯಶಸ್ವಿಯಾಗಿದ್ದಾರೆ. ಬ್ಲಾಗೆಂಬ ಒಲಿಂಪಿಕ್ಸಿನಲ್ಲಿ ಒಂದೊಂದು ಪತ್ರಿಕೆ ಒಂದೊಂದು ಸಾಧನೆ ಮಾಡುತ್ತಿದ್ದರೂ ನಗೆಸಾಮ್ರಾಟರು ಏನನ್ನೂ ಮಾಡದೆ ಸುಮ್ಮನಿದ್ದು ಮಾಡಿರುವ ಸಾಧನೆಯನ್ನು ಯಾರೂ ನೆನೆಸಿಕೊಳ್ಳುತ್ತಿಲ್ಲ ಎಂದು ಅವರ ಅಭಿಮಾನಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಮಧ್ಯೆ ಬೀಜಿಂಗಿಗೆ ತೆರಳದ ಸುದ್ದಿ ಮೂಲಗಳಿಂದ ತರಿಸಿಕೊಂಡ ವರದಿಯ ಪ್ರಕಾರ ಬೀಜಿಂಗಿನಲ್ಲಿ ಎಂಟು ಬಂಗಾರದ ಪದಕಗಳನ್ನು ನುಂಗಿದ ಮೀನನ್ನು ಅಮೇರಿಕಾಕ್ಕೆ ವಾಪಸ್ಸು ಕಳುಹಿಸಿದ ವರದಿಯನ್ನು ಪ್ರಕಟಿಸಿದೆ.

ಕೆಂಡಸಂಪಿಗೆಯ ಸುದ್ದಿಕ್ಯಾತ

ಹುಡುಗರೇ ನೀವು ಎಷ್ಟಾದರೂ ಮಂದಿ ಹುಡುಗಿಯರನ್ನು ಗರ್ಲ್‌ಫ್ರೆಂಡ್‌ಗಳಾಗಿ ಹೊಂದಿರಿ, ಅವರಿಗೆ ಎಷ್ಟಾದರೂ ಮಿಸ್ ಕಾಲ್ ಕೊಡಿ ಇಲ್ಲವೇ ಸ್ವೀಕರಿಸಿ ಆದರೆ ಮೆಸೇಜು ಮಾತ್ರ ಮಾಡಬೇಡಿ. ಹಾಗೊಂದು ವೇಳೆ ನೀವು ಮೇಸೇಜು ಮಾಡಿದರೆ ನಿಮಗೇ ಆಪತ್ತು ಎಂದು ಸರ್ವೆ ತಿಳಿಸಿದ ಸಂಗತಿಯನ್ನು ಸುದ್ದಿ ಕ್ಯಾತ ವರದಿ ಮಾಡಿದ್ದಾನೆ,
ಇತ್ತೀಚೆಗೆ ಈಸೋಪನ ಕಥೆಗಳಂತೆ ತನ್ನ ಪ್ರತಿಯೊಂದು ವರದಿಗೂ ನೀತಿಯನ್ನು ಕೊಡಮಾಡುತ್ತಿರುವ ಸುದ್ದಿ ಕ್ಯಾತ ಈ ವರದಿಗೆ ಕೊಟ್ಟ ನೀತಿ: ಹುಡುಗಿಯರು ಹತ್ತಿರ ಇದ್ದರೆ ಮೊಬೈಲ್ ಹೊರತೆಗೆಯಬೇಡಿ.

ಪಂಚ್ ಲೈನ್

ಬಿಜೆಪಿಯವರು ಏನೇನನ್ನೋ ಗಾಳಿಗೆ ತೂರಿ ಮತ್ತೇನನ್ನೋ ಹಿಡಿದುಕೊಳ್ಳುತ್ತಾರೆ ಎಂದು ಮರ್ಮಾಘಾತುಕಕಾರಿ ಪಂಚನ್ನು ಕೊಟ್ಟಿದ್ದ ಗಣೇಶ್ ಹಠಾತ್ತನೆ ಬ್ಲಾಗಿನ ಅಂಗಳದಿಂದ ಮರೆಯಾಗಿಬಿಟ್ಟಿದ್ದಾರೆ.
ನಗೆ ಸಾಮ್ರಾಟರು ನಮ್ಮ ಪಂಚಿನ ಚಾಂಪಿಯನ್ ಗಣೇಶರನ್ನು ಇತರ ದೇಶದವರು ಅಪಹರಿಸಿ ಒಲಿಂಪಿಕ್ಕಿನಲ್ಲಿ ಪಂಚಿಸಿ ಚಿನ್ನ ಗೆದ್ದು ತರಲು ಕಳುಹಿಸಿದ್ದಾರೇನೋ ಎಂದು ಸಂಶಯಿಸಿದ್ದರು. ಇದನ್ನು ಪತ್ತೇ ಹಚ್ಚಲು ತಮ್ಮ ಚೇಲ ಕುಚೇಲನನ್ನು ಅಟ್ಟಿದ್ದರು. ಆದರೆ ಪಂಚು ಕೊಡುವುದರಲ್ಲಿ ಚಿನ್ನವಿರಲಿ ತಗಡೂ ಸಹ ಗಣೇಶ್‌ಗೆ ಒಲಿಯದಿದ್ದುದರಿಂದ ಸಾಮ್ರಾಟರು ನೆಮ್ಮದಿಯಾಗಿದ್ದಾರೆ.

ಬ್ಲಾಗ್ ಬೀಟ್ 12

1 Aug

ಕನ್ನಡದ ಬ್ಲಾಗುಗಳ ಲೋಕದಲ್ಲಿ ವಿಡಂಬನೆ, ಫೇಕ್ ನ್ಯೂಸ್, ಕಾಲೆಳೆಯುವಿಕೆ, ನವಿರಾದ ಹಾಸ್ಯ, ವಕ್ರತುಂಡೊಕ್ತಿ ಯಾವುದಕ್ಕೂ ಕೊರತೆಯಿಲ್ಲ. ವಾರಕ್ಕೊಂದು ಬಾರಿ ಕನ್ನಡದ ಬ್ಲಾಗು ತೋಟವನ್ನು ಹೊಕ್ಕು ಅಲ್ಲಿನ ರಸವತ್ತಾದ ಬರಹಗಳನ್ನು ಹೆಕ್ಕಿ ತಂದು ಪಟ್ಟಿ ಮಾಡುವ ಕೆಲಸವನ್ನು ಒಪ್ಪಿಕೊಂಡಿದ್ದಾರೆ ನಗೆಸಾಮ್ರಾಟ್. ಇವರ ಬ್ಲಾಗ್ ಬೀಟ್‌ಗೆ ನಿಮ್ಮ ಬ್ಲಾಗೂ ಈಡಾಗಬೇಕೆಂಬ ಆಸೆಯಿದ್ದರೆ ನಿಮ್ಮ ಬ್ಲಾಗಿನ ವಿಳಾಸ ಕೊಟ್ಟು ನಮ್ಮ ವಿಳಾಸಕ್ಕೆ ಒಂದು ಮಿಂಚಂಚೆ ಕಳುಹಿಸಿ.

(more…)

ಬ್ಲಾಗ್ ಬೀಟ್ 11

16 Jul

ಕನ್ನಡದ ಬ್ಲಾಗುಗಳ ಲೋಕದಲ್ಲಿ ವಿಡಂಬನೆ, ಫೇಕ್ ನ್ಯೂಸ್, ಕಾಲೆಳೆಯುವಿಕೆ, ನವಿರಾದ ಹಾಸ್ಯ, ವಕ್ರತುಂಡೊಕ್ತಿ ಯಾವುದಕ್ಕೂ ಕೊರತೆಯಿಲ್ಲ. ವಾರಕ್ಕೊಂದು ಬಾರಿ ಕನ್ನಡದ ಬ್ಲಾಗು ತೋಟವನ್ನು ಹೊಕ್ಕು ಅಲ್ಲಿನ ರಸವತ್ತಾದ ಬರಹಗಳನ್ನು ಹೆಕ್ಕಿ ತಂದು ಪಟ್ಟಿ ಮಾಡುವ ಕೆಲಸವನ್ನು ಮಾಡುತ್ತಿದ್ದಾರೆ ನಗೆಸಾಮ್ರಾಟ್. ಇವರ ಬ್ಲಾಗ್ ಬೀಟ್‌ಗೆ ನಿಮ್ಮ ಬ್ಲಾಗೂ ಈಡಾಗಬೇಕೆಂಬ ಆಸೆಯಿದ್ದರೆ ನಿಮ್ಮ ಬ್ಲಾಗಿನ ವಿಳಾಸ ಕೊಟ್ಟು ನಮ್ಮ ವಿಳಾಸಕ್ಕೆ ಒಂದು ಮಿಂಚಂಚೆ ಕಳುಹಿಸಿ.………………………………………………………………

ಪಂಚ್ ಲೈನ್

‘ಪುತ್ರ’ಕರ್ತರಾಗಿಯೂ, ‘ಪತ್ರ’ಕರ್ತರಾಗಿಯೂ ಖ್ಯಾತರಾದ, ರಾಜಕೀಯ ಮೇಧಾವಿ ಎಂದು ಕುಖ್ಯಾತರಾಗಿರುವ ಶ್ರೀಯುತ ದೇವೇಗೌಡರು ಆತ್ಮಕತೆಯನ್ನು ಬರೆದರೆ ಅದಕ್ಕೆ ಹೆಸರನ್ನೇನಿಡಬಹುದು ಎಂದು ಕೇಳುತ್ತಾರೆ ಪಂಚ್ ಲೈನ್ ಗಣೇಶ್.

ಪ್ರಕಾಶ್ ಶೆಟ್ಟಿ ಪಂಚ್

ರಾಜ್ಯದ ಕುದುರೆ ವ್ಯಾಪಾರ, ಕೇಂದ್ರದ ಕೋಣದ ವ್ಯಾಪಾರ, ಪಾಕಿಸ್ತಾನದ ಅವಾಂತರ ಎಲ್ಲವೂ ಶೆಟ್ಟಿಯವರ ಕುಂಚದ ಪಂಚಿನಲ್ಲಿ ಅರಳಿರುವ ಮೋಡಿಯನ್ನು ಓದೇ ಸವಿಯಬೇಕು…

ಬೊಗಳೆ

ಮಿತ್ರರೊಂದಿಗೆ ಆಗಸದಲ್ಲಿ ಸ್ವಚ್ಛಂದವಾಗಿ ಹಾರಾಡುತ್ತಿದ್ದವರಲ್ಲಿ ಒಬ್ಬ ವ್ಯಕ್ತಿ ದಿಢೀರನೇ ಸಂಸಾರ ಸಾಗರಕ್ಕೆ ಧುಮುಕಿದ ಆತಂಕಕಾರಿ ಘಟನೆಯೊಂದನ್ನು ಬೊಗಳೆ ವರದಿ ಮಾಡಿದೆ.
ಕೇಂದ್ರದಲ್ಲಿ some- ಸದರ ಸೆಳೆಯಲು, ಗಾಳ ಹಾಕಲು ಗಣಿ ಧೂಳಿನ ಧಣಿಗಳಿಗೆ ಬೇಡಿಕೆ ಬಂದಿರುವುದನ್ನು ಬೊಗಳಿದ್ದಾರೆ. ಈ ಮಧ್ಯೆ ಅಸತ್ಯ ಅನ್ವೇಶಿಗಳು ‘ಬ್ಲಾಗ್’ ಎಂಬ ಆಂಗ್ಲಪದಕ್ಕೆ ಕನ್ನಡದ ಪದವನ್ನು ಸೂಚಿಸಿ ಎಂದು ಅನ್ವೇಷಣೆಗೆ ತೊಡಗಿದ್ದಾರೆ. ಬೊಗಳೆ ಎಂಬುದೇ ಸೂಕ್ತವಾದದ್ದು ಎಂಬುದು ಸಾಮ್ರಾಟರ ಅಭಿಪ್ರಾಯ.

ಸುದ್ದಿ ಕ್ಯಾತ

ಕ್ಯಾತೆ ತೆಗೆಯಲು ಸುದ್ದಿಯನ್ನು ಹುಡುಕಿಕೊಂಡು ಹೊರಟ ಕ್ಯಾತ ಜಗತ್ತಿನ ವಿವಿಧ ದೇಶಗಳ ಜನರು ಸ್ನಾನ ಹೇಗೆ ಮಾಡುತ್ತಾರೆ ಎಂಬ ಬಗ್ಗೆ ‘ಸ್ನಾನ ಮಾಡುವವರು’ ನಡೆಸಿರುವ ಅಧ್ಯಯನವನ್ನು ವರದಿ ಮಾಡಿದ್ದಾನೆ.
ಬ್ರಿಟೀಷರು ‘ಕೊಳಕಾಗಿ’ ಸ್ನಾನ ಮಾಡಿ ಸ್ವಚ್ಛವಾಗುತ್ತಾರಂತೆ. ಭಾರತೀಯರಂತೂ ಸ್ನಾನದ ಗೋಜಿಗೇ ಹೋಗುವುದಿಲ್ಲ. ವರದಿ ಓದಿ..

ಬ್ಲಾಗ್ ಬೀಟ್ 10

2 Jul

ಕನ್ನಡದ ಬ್ಲಾಗುಗಳ ಲೋಕದಲ್ಲಿ ವಿಡಂಬನೆ, ಫೇಕ್ ನ್ಯೂಸ್, ಕಾಲೆಳೆಯುವಿಕೆ, ನವಿರಾದ ಹಾಸ್ಯ, ವಕ್ರತುಂಡೊಕ್ತಿ ಯಾವುದಕ್ಕೂ ಕೊರತೆಯಿಲ್ಲ. ವಾರಕ್ಕೊಂದು ಬಾರಿ ಕನ್ನಡದ ಬ್ಲಾಗು ತೋಟವನ್ನು ಹೊಕ್ಕು ಅಲ್ಲಿನ ರಸವತ್ತಾದ ಬರಹಗಳನ್ನು ಹೆಕ್ಕಿ ತಂದು ಪಟ್ಟಿ ಮಾಡುವ ಕೆಲಸವನ್ನು ಮಾಡುತ್ತಿದ್ದಾರೆ ನಗೆಸಾಮ್ರಾಟ್. ಇವರ ಬ್ಲಾಗ್ ಬೀಟ್‌ಗೆ ನಿಮ್ಮ ಬ್ಲಾಗೂ ಈಡಾಗಬೇಕೆಂಬ ಆಸೆಯಿದ್ದರೆ ನಿಮ್ಮ ಬ್ಲಾಗಿನ ವಿಳಾಸ ಕೊಟ್ಟು ನಮ್ಮ ವಿಳಾಸಕ್ಕೆ ಒಂದು ಮಿಂಚಂಚೆ ಕಳುಹಿಸಿ.

………………………………………………………………

ಬೊಗಳೆ ರಗಳೆ

ತಮ್ಮನ್ನು ಉಚ್ಛಾಟಿಸಿದ ಪಕ್ಷ ಯಾವುದು ಎಂಬುದೇ ತಿಳಿಯದೆ ಅಪಾರ ಗೊಂದಲದಲ್ಲಿರುವ ಸಿಂಧ್ಯಾರವರನ್ನು ಖಾಸಗಿಯಾಗಿ ಸಂದರ್ಶನ ಗೈದ ಬೊಗಳೆ ರಗಳೆ ವರದ್ದಿಗಾರ ಸಿಂಧ್ಯಾರವರು ಆ ವರದ್ದಿಗಾರ ನಗೆ ನಗಾರಿಗೆ ಹಾರಬಹುದು ಎಂದು ಹೇಳುತ್ತಿದ್ದಂತೆಯೇ ಸಂದರ್ಶನವನ್ನು ಅರ್ಧಕ್ಕೆ ನಿಲ್ಲಿಸಿ ಓಡಿದ್ದು ನಗೆ ಸಾಮ್ರಾಟರ ಗಮನಕ್ಕೆ ಬಂದಿದೆ. ವರದ್ದಿಗಾರನಿಗೆ ಗಾಳ ಹಾಕುವುದು ಹೇಗೆ ಎಂಬ ಬಗ್ಗೆ ಸಾಮ್ರಾಟರು ಬಳ್ಳಾರಿಯ ಫಾರ್ಮುಲಾದ ಬಗ್ಗೆ ಆಲೋಚಿಸುತ್ತಿದ್ದಾರೆ.

ಪಂಚ್ ಲೈನ್

ಯಡ್ಯೂರಪ್ಪ ಯಾಕೆ ಯಾವಾಗಲೂ ಹಣೆಗೆ (ಇನ್ನೆಲ್ಲಿಗೆ ಇಟ್ಟುಕೊಳ್ಳಲು ಸಾಧ್ಯ?!) ಕುಂಕುಮ ಹಚ್ಚಿಕೊಂಡು ಓಡಾಡುತ್ತಾರೆ ಎಂದು ಪಂಚ್ ಕೊಟ್ಟಿದ್ದಾರೆ ಪಂಚ್ ಲೈನ್ ಗಣೇಶ್. ಹಾಗೆಯೇ ಯಡ್ಯೂರಪ್ಪನವರ ಅಯೋಗ್ಯತೆಯನ್ನು ಪತ್ತೆ ಹಚ್ಚಿರುವ ದೇವೇಗೌಡರು ಏನಂತ ಉಲಿದಿದ್ದಾರೆ ಎನ್ನುವ ಘನ ಘೋರ ಗಂಭೀರ ಸಂಗತಿಯನ್ನು ಮಷ್ಕಿರಿಯಲ್ಲೇ ಪಂಚಿಸಿದ್ದಾರೆ.

ಕಾಲಚಕ್ರ

ಪದ್ಮಪ್ರಿಯ ಪ್ರಕರಣದ ಬಗ್ಗೆ ಬ್ಲಾಗ್ ಬೀಟಿನಲ್ಲಿ ಯಾವುದೂ ಬೀಟಾಗಲಿಲ್ಲವಲ್ಲ ಎಂದು ಪೇಚಾಡುತ್ತಿದ್ದ ಸಾಮ್ರಾಟರಿಗೆ ‘ಕಾಲಚಕ್ರ’ವೇ ಸಮಾಧಾನ ನೀಡಿತು. ‘ಲೇ, ಯಾವನಿಗ್ ಹೇಳ್ತಿ…ಈ ವಯ್ಯಾ ಅದ್ಯಾರ್ನೋ ಇಟ್‌ಕಂಡಿದ್ನಲಾ ಅದು ತಪ್ಪಲ್ವಾ, ಈ ಹಾಳ್ ಸಮಾಜಕ್ಕೆ ಬರೀ ಹೆಂಗುಸ್ರುದ್ದೇ ಕಾಣ್ಸುತ್ತೇ’ ಎಂದು ಹೇಳುತ್ತಾ ಕೈ ನಟಿಕೆ ಮುರಿದ ತಿಮ್ಮಕ್ಕನನ್ನು ಕಂಡು ಸಾಮ್ರಾಟರು ಕೈಮುಗಿದು ಬಂದರು.

ಕೆಂಡಸಂಪಿಗೆಯ  ಸುದ್ದಿ ಕ್ಯಾತ

ಸರ್ಕಸ್ಸಿನ ಟೆಂಟಿನಿಂದ ತನ್ನ ಸಹೋದ್ಯೋಗಿಗಳು ಪರಾರಿಯಾಗಲು ನೆರವು ನೀಡಿದ ಜಿರಾಫೆಯನ್ನು ಪೋಲೀಸರು ಬಂಧಿಸಿರುವ ಸಂಗತಿಯನ್ನು ವರದಿ ಮಾಡಿದ್ದಾನೆ ಸುದ್ದಿಕ್ಯಾತ. ಜಿರಾಫೆಯನ್ನು ಬಂಧಿಸಿರುವ ಪೊಲೀಸರು ಏಣಿ ಹಾಕಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾನೆ ಸುದ್ದಿ ಕ್ಯಾತ. ಪ್ರಾಣಿ ದಯಾ ಸಂಘದ ಮನೇಕಾ ಗಾಂಧಿ ನಾಯಿ ಕೇಸಿನಲ್ಲಿ ಬ್ಯುಸಿ ಇದ್ದು ಜಿರಾಫೆಯನ್ನು ನೋಡಿಕೊಳ್ಳಲು ಸಾಧ್ಯವಾಗಿಲ್ಲ ಎಂಬ ಕ್ಯಾತೆಯನ್ನು ತೆಗೆಯಲು ಸುದ್ದಿ ಕ್ಯಾತ ಮರೆತಂತಿದೆ!

ಬ್ಲಾಗ್ ಬೀಟ್ 9

17 Jun

ಕನ್ನಡದ ಬ್ಲಾಗುಗಳ ಲೋಕದಲ್ಲಿ ವಿಡಂಬನೆ, ಫೇಕ್ ನ್ಯೂಸ್, ಕಾಲೆಳೆಯುವಿಕೆ, ನವಿರಾದ ಹಾಸ್ಯ, ವಕ್ರತುಂಡೊಕ್ತಿ ಯಾವುದಕ್ಕೂ ಕೊರತೆಯಿಲ್ಲ. ವಾರಕ್ಕೊಂದು ಬಾರಿ ಕನ್ನಡದ ಬ್ಲಾಗು ತೋಟವನ್ನು ಹೊಕ್ಕು ಅಲ್ಲಿನ ರಸವತ್ತಾದ ಬರಹಗಳನ್ನು ಹೆಕ್ಕಿ ತಂದು ಪಟ್ಟಿ ಮಾಡುವ ಕೆಲಸವನ್ನು ಒಪ್ಪಿಕೊಂಡಿದ್ದಾರೆ ಸುದ್ದೀಶ. ಇವರ ಬ್ಲಾಗ್ ಬೀಟ್‌ಗೆ ನಿಮ್ಮ ಬ್ಲಾಗೂ ಈಡಾಗಬೇಕೆಂಬ ಆಸೆಯಿದ್ದರೆ ನಿಮ್ಮ ಬ್ಲಾಗಿನ ವಿಳಾಸ ಕೊಟ್ಟು ನಮ್ಮ ವಿಳಾಸಕ್ಕೆ ಒಂದು ಮಿಂಚಂಚೆ ಕಳುಹಿಸಿ.

………………………………………………………………

ಬೊಗಳೆ ರಗಳೆ

ಇಂಧನ ಬೆಲೆಯೇರಿಕೆಯ ವಿರುದ್ಧ ವಾಹನ ಚಾಲಕರು ಬೈದಾಡಿ ಬಾಯಿ ಸೇವೆ ಮುಗಿಸಿಕೊಂಡು ತಮ್ಮ ಗಾಡಿಗಳಿಗೆ ಇಂಧನ ತುಂಬಿಸಿಕೊಂಡು ರೊಯ್ಯನೆ ಹೊರಡುತ್ತಿರುವಾಗ ಬೊಗಳೆ ರಗಳೆರ ಸೊಂಪಾದಕರಿಗೆ ಸಂಕಟದ ಸ್ಥಿತಿ ಬಂದಿದೆ. ಬೊಗಳೆ ಬಿಡುವುದರಲ್ಲಿ ಬೊಗಳೂರಿನಲ್ಲೇ ಫೇಮಸ್ಸಾದ ಸೊಂಪಾದಕರನ್ನೇ ಮೀರಿಸುವ ಹಾಗೆ ಎಡ, ಬಲ ಪಕ್ಷಗಳು, ಕೈ ಕಾಲು ಪಕ್ಷಗಳು, ನಿಧಾನ ಮಂತ್ರಿ, ಪಿತ್ಥ ಸಚಿವರು ಬೊಗಳೆ ಬಿಡುತ್ತಿರುವುದನ್ನು ಕಂಡು ಅಕ್ಷರಶಃ ಕಂಗಾಲಾಗಿದ್ದಾರೆ.

ವಿಜ್ಞಾನಿಗಳು ಗಾಳ ಹಾಕಿ ಮೀನುಗಳನ್ನು ಹಿಡಿಯುವ ಕೋತಿಯನ್ನು ಪತ್ತೇ ಹಚ್ಚಿರುವುದನ್ನು ಎಸ್.ಎಂ.ಎಸ್ ಮೂಲಕ ತಿಳಿದು ಗಾಬರಿಯಿಂದ ನಾಪತ್ತೆಯಾಗಿದ್ದ ಏಕಸದಸ್ಯ ಬ್ಯೂರೋದ ಸಮಸ್ತ ಸಿಬ್ಬಂದಿ ಈಗ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಏಕೆಂದಿರಾ? ಇಲ್ಲಿ ಓದಿ…

ಪ್ರಕಾಶ್ ಶೆಟ್ಟಿ ಗೆರೆಗಳ ಪಂಚ್

ಬೆಲೆಯೇರಿಕೆ, ಪೆಟ್ರೋಲು ಬೆಲೆ ತುಟ್ಟಿ… ಕಾಂಗ್ರೆಸ್ ಸರಕಾರದ ನಿಷ್ಠೆಯ ನವೀಕರಣ… ಎಲ್ಲಕ್ಕೂ ಪ್ರಕಾಶ್ ಶೆಟ್ಟಿ ಗೆರೆಗಳನ್ನು ಕೊಟ್ಟಿದ್ದಾರೆ, ಗೆರೆಗಳ ಮೂಲಕ ಬರೆ ಎಳೆದಿದ್ದಾರೆ. ಇಲ್ಲಿ ನೋಡಿ .

ಪಂಚ್ ಲೈನ್

ಪಂಚಿಗಾಗಿ ಲೈನುಗಳನ್ನು ಬರೆಯುವ ಗಣೇಶ್ ಬಹುದೊಡ್ಡ ಮ್ಯಾನೇಜ್ ಮೆಂಟ್ ಗುರುವಾಗುವ ಎಲ್ಲಾ ಲಕ್ಷಣಗಳನ್ನು ತೋರ್ಪಡಿಸುತ್ತಿದ್ದಾರೆ. ಅವರ ಇತ್ತೀಚಿನ ಪಂಚ್ ಸಾಲುಗಳನ್ನೇ ನೋಡಿ…
ಕೊಲೆ ಮಾಡಿಯೂ ಶಿಕ್ಷೆ ಅನುಭವಿಸಬಾರದೆಂದರೆ ಏನು ಮಾಡಬೇಕು?
ನಿಷ್ಪಕ್ಷಪಾತ, ಸತ್ಯನಿಷ್ಠತೆ, ನ್ಯಾಯಯುತ ಸುದ್ದಿಗೆ ಅತ್ಯುತ್ತಮ ಉದಾಹರಣೆ ಯಾವುದು?
ಪೆಟ್ರೋಲ್ ಡಿಸೇಲ್ ಬೆಲೆ ಗಗನಕ್ಕೇರಿದೆ ನಾವೇನು ಮಾಡಬಹುದು?

ಕಾಲ ಚಕ್ರ

ಸಮೃದ್ಧ ಸರಕಾರಕ್ಕೆ ಮೂರೇ ಗೇಣು ಎಂದು ಹಲುಬುತ್ತಿರುವ ಬಿಜೆಪಿ ಸರಕಾರ ಭಿನ್ನಮತೀಯತೆಯನ್ನು ಶಮನ ಮಾಡಿ ಶವಸಂಸ್ಕಾರ ಮಾಡುವುದಕ್ಕೆ ಏನು ಮಾಡಬೇಕು ಅನ್ನೋ ಪ್ರಶ್ನೆಗೆ ನಮ್ ನಂಜ ಹಿಂಗಂತ ಉತ್ತರಿಸವ್ನೆ ಇಲ್ಲಿ… ‘ಹಂಗಲ್ಲ ಸರ್ರ, ಕೊನಿಗೆ ನೂರಾ ಹತ್ತು ಜನಕ್ಕ ನೂರಾ ಹತ್ತು ಮಂತ್ರಿಗಳಾದ್ರೂ ಆದ್ರೆ ಆವಾಗ ಭಿನ್ನ ಮತಾನೇ ಇರಂಗಿಲ್ಲ ಏನಂತೀರಿ…’

………………………………………………………………

ಕಳೆದ ಸಂಚಿಕೆಯ ಬ್ಲಾಗ್ ಬೀಟ್

ಬ್ಲಾಗ್ ಬೀಟ್ 8

28 May

ಕನ್ನಡದ ಬ್ಲಾಗುಗಳ ಲೋಕದಲ್ಲಿ ವಿಡಂಬನೆ, ಫೇಕ್ ನ್ಯೂಸ್, ಕಾಲೆಳೆಯುವಿಕೆ, ನವಿರಾದ ಹಾಸ್ಯ, ವಕ್ರತುಂಡೊಕ್ತಿ ಯಾವುದಕ್ಕೂ ಕೊರತೆಯಿಲ್ಲ. ವಾರಕ್ಕೊಂದು ಬಾರಿ ಕನ್ನಡದ ಬ್ಲಾಗು ತೋಟವನ್ನು ಹೊಕ್ಕು ಅಲ್ಲಿನ ರಸವತ್ತಾದ ಬರಹಗಳನ್ನು ಹೆಕ್ಕಿ ತಂದು ಪಟ್ಟಿ ಮಾಡುವ ಕೆಲಸವನ್ನು ಒಪ್ಪಿಕೊಂಡಿದ್ದಾರೆ ಸುದ್ದೀಶ. ಇವರ ಬ್ಲಾಗ್ ಬೀಟ್‌ಗೆ ನಿಮ್ಮ ಬ್ಲಾಗೂ ಈಡಾಗಬೇಕೆಂಬ ಆಸೆಯಿದ್ದರೆ ನಿಮ್ಮ ಬ್ಲಾಗಿನ ವಿಳಾಸ ಕೊಟ್ಟು ನಮ್ಮ ವಿಳಾಸಕ್ಕೆ ಒಂದು ಮಿಂಚಂಚೆ ಕಳುಹಿಸಿ.

………………………………………………………………..

ಪಂಚ್ ಲೈನ್

ಪಂಚು ಹೊಡೆಯುವುದರಲ್ಲಿ ಸಿದ್ಧ ಹಸ್ತರಾಗಿ ಕಾಣುವ ಗಣೇಶ್ ನಿಜವಾದ ಮೌತ್ ಕಾ ಸೌದಾಗರ್ ನಮ್ಮ ಸೋನಿಯಮ್ಮ ಹೇಳಿದ ಹಾಗೆ ಗುಜರಾಥಿನ ನರೇಂದ್ರ ಮೋದಿಯಲ್ಲ. ಮತ್ತ್ಯಾರು? ಹಾಗಾದರೆ ಈ ಲಿಂಕನ್ನು ಕ್ಲಿಕ್ಕಿಸಿ.

ಸಂತೆ ನೆರೆಯುವುದಕ್ಕೆ ಮುನ್ನವೇ ಗಂಟು ಕಳ್ಳರು ದೌಡಾಯಿಸಿದರು ಎಂಬಂತೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ನೂ ತೆರೆಯುವುದಕ್ಕೆ ಮುಂಚೆಯೇ ಅದಕ್ಕೆ ಯಾವ ಹೆಸರಿಡಬೇಕು ಎಂಬ ಬಗ್ಗೆ ಚೌಕಾಶಿ ನಡೆಯಲು ಶುರುವಾಗಿದೆ. ಕೆಂಪೇ‘ಗೌಡ’ರ ಹೆಸರಿಡಬೇಕೋ, ವಿಶ್ವೇಶ್ವರ‘ಅಯ್ಯ’ನವರ ಹೆಸರಿಡಬೇಕೋ, ಟಿಪ್ಪು ‘ಸುಲ್ತಾನ್’ನ ಹೆಸರನ್ನು ಮಡಗಬೇಕೋ ಅನ್ನೋ ವಿಚಾರವಾಗಿ ಭಾರೀ ‘ಚರ್ಚೆ’ ನಡೆಯುತ್ತಿದೆ. ಇದಕ್ಕೊಂದು ಒಳ್ಳೆಯ ಪರಿಹಾರವನ್ನು ಗಣೇಶ್ ಕೊಟ್ಟಿದ್ದಾರೆ. ವಿಮಾನ ನಿಲ್ದಾಣಕ್ಕೆ ಯಾರ ಹೆಸರು ಸೂಕ್ತ?

………………………………………………………………..

ಬೊಗಳೆ ರಗಳೆ

ಕನ್ನಡ ನಾಡಿನ ಪತ್ರಿಕೆಗಳೆಲ್ಲಾ ರಾಜಕೀಯದ ಬಿಸಿಯನ್ನು ಮನೆ ಮೆನೆಗೆ ತಲುಪಿಸಿ ಬೇಸಿಗೆಯನ್ನು ಮತ್ತಷ್ಟು ಅಸಹನೀಯಗೊಳಿಸುವಲ್ಲಿ ಪೈಪೋಟಿ ನಡೆಸುತ್ತಿರುವಾಗ ಬೊಗಳೂರು ಭಯ ಭೀತ ಬ್ಯೂರೋ ತಾನೇನೂ ಕಡಿಮೆಯಿಲ್ಲ ಎಂದು ರಾಜಕೀಯ ವರದ್ದಿಯನ್ನು ಪ್ರಕಟಿಸಿದೆ. ರಾಜ್ಯಾದ್ಯಂತ ನೇತಾಗಳೆಂಬ ಭೂತಗಳು ಓಡಾಡುತ್ತಾ ಭಯೋತ್ಪಾದನೆ ಮಾಡುತ್ತಿರುವುದನ್ನು ‘ರಾತ್ರಿ ಏಳರವರೆಗಿನ ಪ್ರಜ್ಞಾವಂತ’ ಮತದಾರ ಅನಂತರ ಕಣ್ಣು ಕೆಂಪು ಮಾಡಿಕೊಂಡು ನೋಡುತ್ತಿರುವುದನ್ನು ಬೊಗಳೂರು ವಾಹ್-ರದ್ದಿಗಾರ ತಂದು ಸುರಿದಿದ್ದಾನೆ.

………………………………………………………………..

ಮಜಾವಾಣಿ

ಚುನಾವಣೆಗಳು ಹತ್ತಿರಬಂದಾಗ ಪತ್ರಿಕೆಗಳು ಮದುವೆ ಮನೆಯಲ್ಲಿ ಸಿಂಗಾರಗೊಂಡ ವಧುವಿನ ಹಾಗಾಗಿರುತ್ತವೆ. ಇದಕ್ಕೆ ಅಂತರ್ಜಾಲದ ಅತ್ಯಂತ ‘ಜನಪ್ರಿಯ’ ‘ವಿಶ್ವಾಸಾರ್ಹ’ ಪತ್ರಿಕೆಯೂ ಕಡಿಮೆಯಿಲ್ಲ. ಅವರು ಚುನಾವಣೆಯ ಸಂದರ್ಭದಲ್ಲಿ ಜನಮತವನ್ನು ಸಂಗ್ರಹಿಸಿ ತಮ್ಮ ಪತ್ರಿಕೆಯಲ್ಲಿ ಚಾಪಿಸಿಕೊಂಡಿದ್ದಾರೆ. ಮುಂದಿನದು ಸಂಪಾದಕರ ಮಾತುಗಳಲ್ಲಿ…

ಕರ್ನಾಟಕ ರಾಜ್ಯಕ್ಕೆ ಇದು ಸಂಕ್ರಮಣ ಕಾಲ. ಯಾರಿಂದ ನಾವು ಮೋಸ ಹೋಗಬೇಕೆಂದು ನಿರ್ಧರಿಸ ಬೇಕಾದ ಕಾಲ. ಇಂತಹ ಸಂದರ್ಭದಲ್ಲಿ,  ನಮ್ಮ ನಾಡು,ನುಡಿ, ರಾಜಕಾರಣಗಳ ಬಗೆಗೆ ನಮ್ಮ ಜನರ ನಾಡಿ ಹೇಗೆ ಮಿಡಿಯುತ್ತಿದೆ, ಅವರನ್ನು ಕಾಡುತ್ತಿರುವ ವಿಷಯಗಳೇನು ಎಂಬುದನ್ನು ಅವರ ಮಾತುಗಳಲ್ಲೇ ಇಲ್ಲಿ ಹಿಡಿದು ಕೊಡಲಾಗಿದೆ.   – ಸಂ.

………………………………………………………………..

ಪ್ರಕಾಶ್ ಶೆಟ್ಟಿ ಪಂಚ್

ಶೆಟ್ಟಿಯವರ ಗೆರೆಗಳಲ್ಲಿ ಸೆರೆಯಾಗಿರುವ ಸಂಗತಿಗಳು ಹಲವು. ಗರ್ಜಿಸುವುದನ್ನೇ ಮರೆತಿರುವ ಮಹಾರಾಷ್ಟ್ರದ ಹಳೆಯ ಹುಲಿಯ ಅಳಲಾದರೂ ಏನು? ಜಾರ್ಜು ಬುಸ್ಸು ಇನ್ ಫ್ಲೇಷನ್ನಿಗೆ ಸಂ-ಚೋದಿಸಿದ ಕಾರಣ ಯಾವುದು? ಚುನಾವಣೆ ಕಿಕ್ಕಿಗಾಗಿ ಕೆಲವು ಶೆಟ್ಟಿ ಪಂಚುಗಳು….

………………………………………………………………..

Follow

Get every new post delivered to your Inbox.

Join 38 other followers