Tag Archives: ಸುದ್ದಿ ಕ್ಯಾತ

ಬ್ಲಾಗ್ ಬೀಟ್ 15

17 ಸೆಪ್ಟೆಂ

ಕನ್ನಡದ ಬ್ಲಾಗುಗಳ ಲೋಕದಲ್ಲಿ ವಿಡಂಬನೆ, ಫೇಕ್ ನ್ಯೂಸ್, ಕಾಲೆಳೆಯುವಿಕೆ, ನವಿರಾದ ಹಾಸ್ಯ, ವಕ್ರತುಂಡೊಕ್ತಿ ಯಾವುದಕ್ಕೂ ಕೊರತೆಯಿಲ್ಲ. ವಾರಕ್ಕೊಂದು ಬಾರಿ ಕನ್ನಡದ ಬ್ಲಾಗು ತೋಟವನ್ನು ಹೊಕ್ಕು ಅಲ್ಲಿನ ರಸವತ್ತಾದ ಬರಹಗಳನ್ನು ಹೆಕ್ಕಿ ತಂದು ಪಟ್ಟಿ ಮಾಡುವ ಕೆಲಸವನ್ನು ಒಪ್ಪಿಕೊಂಡಿದ್ದಾರೆ ನಗೆಸಾಮ್ರಾಟ್. ಇವರ ಬ್ಲಾಗ್ ಬೀಟ್‌ಗೆ ನಿಮ್ಮ ಬ್ಲಾಗೂ ಈಡಾಗಬೇಕೆಂಬ ಆಸೆಯಿದ್ದರೆ ನಿಮ್ಮ ಬ್ಲಾಗಿನ ವಿಳಾಸ ಕೊಟ್ಟು ನಮ್ಮ ವಿಳಾಸಕ್ಕೆ ಒಂದು ಮಿಂಚಂಚೆ ಕಳುಹಿಸಿ.

……………………………………………………..

ನಗೆ ಸಾಮ್ರಾಟರಿಗೆ ಬೀಟಿಗೆ ಹೊರಡುವುದು ಯಾಕೋ ತುಂಬಾ ಯಾಂತ್ರಿಕವೆನಿಸಲು ಶುರುವಾಗಿದೆ. ನಕ್ಕು ನಕ್ಕೂ ಮಂದಿ ದಣಿದಿರುವಂತೆ ಬ್ಲಾಗುಗಳಲ್ಲಿ ನಗೆಯ ಬರವಣಿಗೆಗೆ ಸ್ವಲ್ಪ ದಣಿವು ಕಾಣಿಸಿಕೊಂಡಂತೆ ಕಾಣುತ್ತದೆ. ಆದರೂ ಸಾಮ್ರಾಟರು ತಮ್ಮ ಕೆಲಸವನ್ನು ತಾವು ಮಾಡುತ್ತಿದ್ದಾರೆ. ಈ ಸಂಚಿಕೆ ಬ್ಲಾಗ್ ಬೀಟ್ ನಿಮ್ಮೆದುರಿನಲ್ಲಿದೆ:

ಕೆಂಡ ಸಂಪಿಗೆಯ ಸುದ್ದಿ ಕ್ಯಾತ

ಹವ್ಯಾಸಕ್ಕಾಗಿ ಮದುವೆಯಾಗಿ, ಕ್ರಮೇಣ ಮದುವೆಯಾಗುವುದನ್ನೇ ಹವ್ಯಾಸವಾಗಿಸಿಕೊಂಡು ಎಂಭತ್ತಾರು ಪತ್ನಿಯರನ್ನು ಕಟ್ಟಿಕೊಂಡು ನೂರಾ ಎಪ್ಪತ್ತು ಮಕ್ಕಳ ತಂದೆಯಾಗಿರುವ ನೈಜೀರಿಯಾದ ಮಹಮ್ಮದ್ ಬೆಲ್ಲಾ ಅಬೂಬೆಕರ್ ನ ಸಾಧನೆ ಪೊಲೀಸರ ಕೆಂಗಣ್ಣಿಗೆ ಗುರಿಯಾಗಿರುವುದನ್ನು ಸುದ್ದಿ ಕ್ಯಾತ ವರದಿ ಮಾಡಿದ್ದಾನೆ.

ಎಂಭತ್ತಾರು ಪತ್ನಿಯರನ್ನು ಕಟ್ಟಿಕೊಂಡು ಎಂಭತ್ನಾಲ್ಕು ವರ್ಷ ಬದುಕಿರುವ ಅಬೂಬೆಕರ್‌ನಿಂದ ‘ಯಶಸ್ವೀ ಗಂಡನಿಗೆ ಹತ್ತೇ ಸೂತ್ರಗಳು’ ಪುಸ್ತಕ ಬರೆಸಲು ಸಂಪರ್ಕಿಸಲಾಗುತ್ತಿದೆ. ಅದಕ್ಕೆ ಬುಕರ್ ಸಿಕ್ಕರೂ ಸಿಗಬಹುದು!

ಪ್ರಕಾಶ್ ಶೆಟ್ಟಿ ಪಂಚ್

ಹ್ಯಾಂಗಿಸಿ ಕೊಂಡ ಪ್ರಕಾಶ್ ಶೆಟ್ಟಿ ತಮ್ಮ ಕಾರ್ಟೂನುಗಳ ಪ್ರದರ್ಶನದ ವರದಿಯನ್ನು ಬ್ಲಾಗಿನಲ್ಲಿ ಅಲ್ಲಲ್ಲಿ ಚೆಲ್ಲಿದ್ದಾರೆ.
ಎಂದಿನಂತೆ ಅವರ ಹರಿತವಾದ ಗೆರೆಗಳ ಬರೆಗೆ ನರೇಂದ್ರ ಮೋದಿ, ಯಡ್ಡಿ, ಲಾಲು, ಪೊಲೀಸು ಬಲಿಯಾಗಿದ್ದಾರೆ.

ಬೊಗಳೂರು ವಾರ್ತೆ

ಜಗತ್ತಿನಲ್ಲಿ ಹೆಚ್ಚುತ್ತಿರುವ ಹಾಟ್ ಕಲ್ಚರಿನ ಬಗ್ಗೆ ಕಾಳಜಿ ವ್ಯಕ್ತಪಡಿಸಿರುವ ಬೊಗಳೂರು ಬ್ಯೂರೋ, ಸ್ಯಾಂಪಲ್ಲಿಗೆ ಬಟ್ಟೆಹಾಕುವ ನಟೀ ಮಣಿಯರನ್ನೂ, ಬಟ್ಟೆಯನ್ನು ಸ್ಯಾಂಪಲ್ಲಿಗಾಗಿ ಹಾಕುವವರನ್ನೂ ತರಾಟೆಗೆ ತೆಗೆದುಕೊಂಡಿದೆ.
ಡಿವೋರ್ಸು, ತಾಳಿ ಎಂದೆಲ್ಲಾ ಮ್ಯಾರೀಡ್ ಲೈಫಿನ ವರೀಡ್ ಸಂಗತಿಗಳನ್ನು ವರದ್ದಿ ಮಾಡಿರುವುದರಿಂದ ಬ್ಯಾಚುಲರ್ ಆದ ನಗೆ ಸಾಮ್ರಾಟರು ಅಲ್ಲಿಂದ ಕಾಲ್ಕೀಳುವ ಮುನ್ನ ಈ ನೋಟೀಸನ್ನು ಗಮನಿಸಿದ್ದಾರೆ:
“ಬ್ರಹ್ಮಾಂಡ ಸೃಷ್ಟಿಯ ರಹಸ್ಯವರಿಯುವ ನೆಪದಲ್ಲಿ ಬೊಗಳೆ ರಗಳೆ ಬ್ಯುರೋದ ವಿರುದ್ಧ ಸುರಂಗ ಕಾರ್ಯಾಚರಣೆ ನಡೆಸಿ, ರಹಸ್ಯ ಪತ್ತೆ ಹಚ್ಚುವ ಅಸಹ್ಯ ಕಾರ್ಯ ಆರಂಭವಾಗಿರುವುದರಿಂದ ಕೆರಳಿರುವ ಬೊಗಳೂರು ಮಂದಿ, ಪ್ರತಿಭಟನಾರ್ಥವಾಗಿ ಬ್ಯುರೋ ಬಾಗಿಲು ಮುಚ್ಚಿ ಒಂದು ವಾರ ಕಾಲ ಪರಾರಿಯಾಗಲು ಮತ್ತು ಇಲ್ಲದ ತಲೆ ಮರೆಸಿಕೊಳ್ಳಲು ನಿರ್ಧರಿಸಿದ್ದಾರೆ.”
ತಲೆ ಮರೆಸಿಕೊಂಡಿರುವ ಬೊಗಳೂರು ಮಂದಿಯನ್ನು ಪತ್ತೆ ಹಚ್ಚಲು ಸೂಪರ್ ಕಾಪ್ ಚೇಲ ಕುಚೇಲನಿಗೆ ಬಹಳಷ್ಟು ಅರ್ಜಿಗಳು ಬಂದಿದ್ದು ಆತ ಸಾಮ್ರಾಟರ ಅಪ್ಪಣೆಗಾಗಿ ಕಾಯುತ್ತಾ ತುದಿಗಾಲಲ್ಲಿ ಮಲಗಿ ಗೊರಕೆ ಹೊಡೆಯುತ್ತಿದ್ದಾನೆ!

ಮಜಾವಾಣಿ

ತಮ್ಮ ಪತ್ರಿಕೆಗಾಗಿ ಪ್ರತ್ಯೇಕ ತಾಣವನ್ನು ತೆರೆದಿರುವ ಮಜಾವಾಣಿ ತನ್ನ ಅತ್ಯಂತ ನಿಕಟ ಪ್ರತಿಸ್ಪರ್ಧಿ ಪತ್ರಿಕೆಯ ವೇಗಕ್ಕೆ ತಕ್ಕಂತೆ ಓಡಲು ಸಾಧ್ಯವಾಗುತ್ತಿಲ್ಲ ಎಂಬ ಸಂಗತಿ ಸಾಮ್ರಾಟರ ಗಮನಕ್ಕೆ ಬಂದಿದೆ. ಹೀಗಾಗಿ ಅಲ್ಲಿ ಹೊಸ ವರದಿಗಳ್ಯಾವುವೂ ಪತ್ತೆಯಾಗಿಲ್ಲ.
ಸಾಮ್ರಾಟರು ಬೀಟು ಹಾಕುವಾಗ ‘ಹಗ್ಗಗಳ ಮೇಲೆ ಶಾಸನ ವಿಧಿಸಿದ ಎಚ್ಚರಿಕೆಯ’ ವರದಿ ಪತ್ತೆಯಾಯಿತು.

ಬ್ಲಾಗ್ ಬೀಟ್ 12

1 ಆಗಸ್ಟ್

ಕನ್ನಡದ ಬ್ಲಾಗುಗಳ ಲೋಕದಲ್ಲಿ ವಿಡಂಬನೆ, ಫೇಕ್ ನ್ಯೂಸ್, ಕಾಲೆಳೆಯುವಿಕೆ, ನವಿರಾದ ಹಾಸ್ಯ, ವಕ್ರತುಂಡೊಕ್ತಿ ಯಾವುದಕ್ಕೂ ಕೊರತೆಯಿಲ್ಲ. ವಾರಕ್ಕೊಂದು ಬಾರಿ ಕನ್ನಡದ ಬ್ಲಾಗು ತೋಟವನ್ನು ಹೊಕ್ಕು ಅಲ್ಲಿನ ರಸವತ್ತಾದ ಬರಹಗಳನ್ನು ಹೆಕ್ಕಿ ತಂದು ಪಟ್ಟಿ ಮಾಡುವ ಕೆಲಸವನ್ನು ಒಪ್ಪಿಕೊಂಡಿದ್ದಾರೆ ನಗೆಸಾಮ್ರಾಟ್. ಇವರ ಬ್ಲಾಗ್ ಬೀಟ್‌ಗೆ ನಿಮ್ಮ ಬ್ಲಾಗೂ ಈಡಾಗಬೇಕೆಂಬ ಆಸೆಯಿದ್ದರೆ ನಿಮ್ಮ ಬ್ಲಾಗಿನ ವಿಳಾಸ ಕೊಟ್ಟು ನಮ್ಮ ವಿಳಾಸಕ್ಕೆ ಒಂದು ಮಿಂಚಂಚೆ ಕಳುಹಿಸಿ.

ಓದನ್ನು ಮುಂದುವರೆಸಿ

ಬ್ಲಾಗ್ ಬೀಟ್ 11

16 ಜುಲೈ

ಕನ್ನಡದ ಬ್ಲಾಗುಗಳ ಲೋಕದಲ್ಲಿ ವಿಡಂಬನೆ, ಫೇಕ್ ನ್ಯೂಸ್, ಕಾಲೆಳೆಯುವಿಕೆ, ನವಿರಾದ ಹಾಸ್ಯ, ವಕ್ರತುಂಡೊಕ್ತಿ ಯಾವುದಕ್ಕೂ ಕೊರತೆಯಿಲ್ಲ. ವಾರಕ್ಕೊಂದು ಬಾರಿ ಕನ್ನಡದ ಬ್ಲಾಗು ತೋಟವನ್ನು ಹೊಕ್ಕು ಅಲ್ಲಿನ ರಸವತ್ತಾದ ಬರಹಗಳನ್ನು ಹೆಕ್ಕಿ ತಂದು ಪಟ್ಟಿ ಮಾಡುವ ಕೆಲಸವನ್ನು ಮಾಡುತ್ತಿದ್ದಾರೆ ನಗೆಸಾಮ್ರಾಟ್. ಇವರ ಬ್ಲಾಗ್ ಬೀಟ್‌ಗೆ ನಿಮ್ಮ ಬ್ಲಾಗೂ ಈಡಾಗಬೇಕೆಂಬ ಆಸೆಯಿದ್ದರೆ ನಿಮ್ಮ ಬ್ಲಾಗಿನ ವಿಳಾಸ ಕೊಟ್ಟು ನಮ್ಮ ವಿಳಾಸಕ್ಕೆ ಒಂದು ಮಿಂಚಂಚೆ ಕಳುಹಿಸಿ.………………………………………………………………

ಪಂಚ್ ಲೈನ್

‘ಪುತ್ರ’ಕರ್ತರಾಗಿಯೂ, ‘ಪತ್ರ’ಕರ್ತರಾಗಿಯೂ ಖ್ಯಾತರಾದ, ರಾಜಕೀಯ ಮೇಧಾವಿ ಎಂದು ಕುಖ್ಯಾತರಾಗಿರುವ ಶ್ರೀಯುತ ದೇವೇಗೌಡರು ಆತ್ಮಕತೆಯನ್ನು ಬರೆದರೆ ಅದಕ್ಕೆ ಹೆಸರನ್ನೇನಿಡಬಹುದು ಎಂದು ಕೇಳುತ್ತಾರೆ ಪಂಚ್ ಲೈನ್ ಗಣೇಶ್.

ಪ್ರಕಾಶ್ ಶೆಟ್ಟಿ ಪಂಚ್

ರಾಜ್ಯದ ಕುದುರೆ ವ್ಯಾಪಾರ, ಕೇಂದ್ರದ ಕೋಣದ ವ್ಯಾಪಾರ, ಪಾಕಿಸ್ತಾನದ ಅವಾಂತರ ಎಲ್ಲವೂ ಶೆಟ್ಟಿಯವರ ಕುಂಚದ ಪಂಚಿನಲ್ಲಿ ಅರಳಿರುವ ಮೋಡಿಯನ್ನು ಓದೇ ಸವಿಯಬೇಕು…

ಬೊಗಳೆ

ಮಿತ್ರರೊಂದಿಗೆ ಆಗಸದಲ್ಲಿ ಸ್ವಚ್ಛಂದವಾಗಿ ಹಾರಾಡುತ್ತಿದ್ದವರಲ್ಲಿ ಒಬ್ಬ ವ್ಯಕ್ತಿ ದಿಢೀರನೇ ಸಂಸಾರ ಸಾಗರಕ್ಕೆ ಧುಮುಕಿದ ಆತಂಕಕಾರಿ ಘಟನೆಯೊಂದನ್ನು ಬೊಗಳೆ ವರದಿ ಮಾಡಿದೆ.
ಕೇಂದ್ರದಲ್ಲಿ some- ಸದರ ಸೆಳೆಯಲು, ಗಾಳ ಹಾಕಲು ಗಣಿ ಧೂಳಿನ ಧಣಿಗಳಿಗೆ ಬೇಡಿಕೆ ಬಂದಿರುವುದನ್ನು ಬೊಗಳಿದ್ದಾರೆ. ಈ ಮಧ್ಯೆ ಅಸತ್ಯ ಅನ್ವೇಶಿಗಳು ‘ಬ್ಲಾಗ್’ ಎಂಬ ಆಂಗ್ಲಪದಕ್ಕೆ ಕನ್ನಡದ ಪದವನ್ನು ಸೂಚಿಸಿ ಎಂದು ಅನ್ವೇಷಣೆಗೆ ತೊಡಗಿದ್ದಾರೆ. ಬೊಗಳೆ ಎಂಬುದೇ ಸೂಕ್ತವಾದದ್ದು ಎಂಬುದು ಸಾಮ್ರಾಟರ ಅಭಿಪ್ರಾಯ.

ಸುದ್ದಿ ಕ್ಯಾತ

ಕ್ಯಾತೆ ತೆಗೆಯಲು ಸುದ್ದಿಯನ್ನು ಹುಡುಕಿಕೊಂಡು ಹೊರಟ ಕ್ಯಾತ ಜಗತ್ತಿನ ವಿವಿಧ ದೇಶಗಳ ಜನರು ಸ್ನಾನ ಹೇಗೆ ಮಾಡುತ್ತಾರೆ ಎಂಬ ಬಗ್ಗೆ ‘ಸ್ನಾನ ಮಾಡುವವರು’ ನಡೆಸಿರುವ ಅಧ್ಯಯನವನ್ನು ವರದಿ ಮಾಡಿದ್ದಾನೆ.
ಬ್ರಿಟೀಷರು ‘ಕೊಳಕಾಗಿ’ ಸ್ನಾನ ಮಾಡಿ ಸ್ವಚ್ಛವಾಗುತ್ತಾರಂತೆ. ಭಾರತೀಯರಂತೂ ಸ್ನಾನದ ಗೋಜಿಗೇ ಹೋಗುವುದಿಲ್ಲ. ವರದಿ ಓದಿ..

ಬ್ಲಾಗ್ ಬೀಟ್ 10

2 ಜುಲೈ

ಕನ್ನಡದ ಬ್ಲಾಗುಗಳ ಲೋಕದಲ್ಲಿ ವಿಡಂಬನೆ, ಫೇಕ್ ನ್ಯೂಸ್, ಕಾಲೆಳೆಯುವಿಕೆ, ನವಿರಾದ ಹಾಸ್ಯ, ವಕ್ರತುಂಡೊಕ್ತಿ ಯಾವುದಕ್ಕೂ ಕೊರತೆಯಿಲ್ಲ. ವಾರಕ್ಕೊಂದು ಬಾರಿ ಕನ್ನಡದ ಬ್ಲಾಗು ತೋಟವನ್ನು ಹೊಕ್ಕು ಅಲ್ಲಿನ ರಸವತ್ತಾದ ಬರಹಗಳನ್ನು ಹೆಕ್ಕಿ ತಂದು ಪಟ್ಟಿ ಮಾಡುವ ಕೆಲಸವನ್ನು ಮಾಡುತ್ತಿದ್ದಾರೆ ನಗೆಸಾಮ್ರಾಟ್. ಇವರ ಬ್ಲಾಗ್ ಬೀಟ್‌ಗೆ ನಿಮ್ಮ ಬ್ಲಾಗೂ ಈಡಾಗಬೇಕೆಂಬ ಆಸೆಯಿದ್ದರೆ ನಿಮ್ಮ ಬ್ಲಾಗಿನ ವಿಳಾಸ ಕೊಟ್ಟು ನಮ್ಮ ವಿಳಾಸಕ್ಕೆ ಒಂದು ಮಿಂಚಂಚೆ ಕಳುಹಿಸಿ.

………………………………………………………………

ಬೊಗಳೆ ರಗಳೆ

ತಮ್ಮನ್ನು ಉಚ್ಛಾಟಿಸಿದ ಪಕ್ಷ ಯಾವುದು ಎಂಬುದೇ ತಿಳಿಯದೆ ಅಪಾರ ಗೊಂದಲದಲ್ಲಿರುವ ಸಿಂಧ್ಯಾರವರನ್ನು ಖಾಸಗಿಯಾಗಿ ಸಂದರ್ಶನ ಗೈದ ಬೊಗಳೆ ರಗಳೆ ವರದ್ದಿಗಾರ ಸಿಂಧ್ಯಾರವರು ಆ ವರದ್ದಿಗಾರ ನಗೆ ನಗಾರಿಗೆ ಹಾರಬಹುದು ಎಂದು ಹೇಳುತ್ತಿದ್ದಂತೆಯೇ ಸಂದರ್ಶನವನ್ನು ಅರ್ಧಕ್ಕೆ ನಿಲ್ಲಿಸಿ ಓಡಿದ್ದು ನಗೆ ಸಾಮ್ರಾಟರ ಗಮನಕ್ಕೆ ಬಂದಿದೆ. ವರದ್ದಿಗಾರನಿಗೆ ಗಾಳ ಹಾಕುವುದು ಹೇಗೆ ಎಂಬ ಬಗ್ಗೆ ಸಾಮ್ರಾಟರು ಬಳ್ಳಾರಿಯ ಫಾರ್ಮುಲಾದ ಬಗ್ಗೆ ಆಲೋಚಿಸುತ್ತಿದ್ದಾರೆ.

ಪಂಚ್ ಲೈನ್

ಯಡ್ಯೂರಪ್ಪ ಯಾಕೆ ಯಾವಾಗಲೂ ಹಣೆಗೆ (ಇನ್ನೆಲ್ಲಿಗೆ ಇಟ್ಟುಕೊಳ್ಳಲು ಸಾಧ್ಯ?!) ಕುಂಕುಮ ಹಚ್ಚಿಕೊಂಡು ಓಡಾಡುತ್ತಾರೆ ಎಂದು ಪಂಚ್ ಕೊಟ್ಟಿದ್ದಾರೆ ಪಂಚ್ ಲೈನ್ ಗಣೇಶ್. ಹಾಗೆಯೇ ಯಡ್ಯೂರಪ್ಪನವರ ಅಯೋಗ್ಯತೆಯನ್ನು ಪತ್ತೆ ಹಚ್ಚಿರುವ ದೇವೇಗೌಡರು ಏನಂತ ಉಲಿದಿದ್ದಾರೆ ಎನ್ನುವ ಘನ ಘೋರ ಗಂಭೀರ ಸಂಗತಿಯನ್ನು ಮಷ್ಕಿರಿಯಲ್ಲೇ ಪಂಚಿಸಿದ್ದಾರೆ.

ಕಾಲಚಕ್ರ

ಪದ್ಮಪ್ರಿಯ ಪ್ರಕರಣದ ಬಗ್ಗೆ ಬ್ಲಾಗ್ ಬೀಟಿನಲ್ಲಿ ಯಾವುದೂ ಬೀಟಾಗಲಿಲ್ಲವಲ್ಲ ಎಂದು ಪೇಚಾಡುತ್ತಿದ್ದ ಸಾಮ್ರಾಟರಿಗೆ ‘ಕಾಲಚಕ್ರ’ವೇ ಸಮಾಧಾನ ನೀಡಿತು. ‘ಲೇ, ಯಾವನಿಗ್ ಹೇಳ್ತಿ…ಈ ವಯ್ಯಾ ಅದ್ಯಾರ್ನೋ ಇಟ್‌ಕಂಡಿದ್ನಲಾ ಅದು ತಪ್ಪಲ್ವಾ, ಈ ಹಾಳ್ ಸಮಾಜಕ್ಕೆ ಬರೀ ಹೆಂಗುಸ್ರುದ್ದೇ ಕಾಣ್ಸುತ್ತೇ’ ಎಂದು ಹೇಳುತ್ತಾ ಕೈ ನಟಿಕೆ ಮುರಿದ ತಿಮ್ಮಕ್ಕನನ್ನು ಕಂಡು ಸಾಮ್ರಾಟರು ಕೈಮುಗಿದು ಬಂದರು.

ಕೆಂಡಸಂಪಿಗೆಯ  ಸುದ್ದಿ ಕ್ಯಾತ

ಸರ್ಕಸ್ಸಿನ ಟೆಂಟಿನಿಂದ ತನ್ನ ಸಹೋದ್ಯೋಗಿಗಳು ಪರಾರಿಯಾಗಲು ನೆರವು ನೀಡಿದ ಜಿರಾಫೆಯನ್ನು ಪೋಲೀಸರು ಬಂಧಿಸಿರುವ ಸಂಗತಿಯನ್ನು ವರದಿ ಮಾಡಿದ್ದಾನೆ ಸುದ್ದಿಕ್ಯಾತ. ಜಿರಾಫೆಯನ್ನು ಬಂಧಿಸಿರುವ ಪೊಲೀಸರು ಏಣಿ ಹಾಕಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾನೆ ಸುದ್ದಿ ಕ್ಯಾತ. ಪ್ರಾಣಿ ದಯಾ ಸಂಘದ ಮನೇಕಾ ಗಾಂಧಿ ನಾಯಿ ಕೇಸಿನಲ್ಲಿ ಬ್ಯುಸಿ ಇದ್ದು ಜಿರಾಫೆಯನ್ನು ನೋಡಿಕೊಳ್ಳಲು ಸಾಧ್ಯವಾಗಿಲ್ಲ ಎಂಬ ಕ್ಯಾತೆಯನ್ನು ತೆಗೆಯಲು ಸುದ್ದಿ ಕ್ಯಾತ ಮರೆತಂತಿದೆ!

ಬ್ಲಾಗ್ ಬೀಟ್ 8

6 ಮೇ

ಕನ್ನಡದ ಬ್ಲಾಗುಗಳ ಲೋಕದಲ್ಲಿ ವಿಡಂಬನೆ, ಫೇಕ್ ನ್ಯೂಸ್, ಕಾಲೆಳೆಯುವಿಕೆ, ನವಿರಾದ ಹಾಸ್ಯ, ವಕ್ರತುಂಡೊಕ್ತಿ ಯಾವುದಕ್ಕೂ ಕೊರತೆಯಿಲ್ಲ. ವಾರಕ್ಕೊಂದು ಬಾರಿ ಕನ್ನಡದ ಬ್ಲಾಗು ತೋಟವನ್ನು ಹೊಕ್ಕು ಅಲ್ಲಿನ ರಸವತ್ತಾದ ಬರಹಗಳನ್ನು ಹೆಕ್ಕಿ ತಂದು ಪಟ್ಟಿ ಮಾಡುವ ಕೆಲಸವನ್ನು ಒಪ್ಪಿಕೊಂಡಿದ್ದಾರೆ ಸುದ್ದೀಶ. ಇವರ ಬ್ಲಾಗ್ ಬೀಟ್‌ಗೆ ನಿಮ್ಮ ಬ್ಲಾಗೂ ಈಡಾಗಬೇಕೆಂಬ ಆಸೆಯಿದ್ದರೆ ನಿಮ್ಮ ಬ್ಲಾಗಿನ ವಿಳಾಸ ಕೊಟ್ಟು ನಮ್ಮ ವಿಳಾಸಕ್ಕೆ ಒಂದು ಮಿಂಚಂಚೆ ಕಳುಹಿಸಿ.

ಓದನ್ನು ಮುಂದುವರೆಸಿ

ಬ್ಲಾಗ್ ಬೀಟ್ 7

26 ಏಪ್ರಿಲ್

ಕನ್ನಡದ ಬ್ಲಾಗುಗಳ ಲೋಕದಲ್ಲಿ ವಿಡಂಬನೆ, ಫೇಕ್ ನ್ಯೂಸ್, ಕಾಲೆಳೆಯುವಿಕೆ, ನವಿರಾದ ಹಾಸ್ಯ, ವಕ್ರತುಂಡೊಕ್ತಿ ಯಾವುದಕ್ಕೂ ಕೊರತೆಯಿಲ್ಲ. ವಾರಕ್ಕೊಂದು ಬಾರಿ ಕನ್ನಡದ ಬ್ಲಾಗು ತೋಟವನ್ನು ಹೊಕ್ಕು ಅಲ್ಲಿನ ರಸವತ್ತಾದ ಬರಹಗಳನ್ನು ಹೆಕ್ಕಿ ತಂದು ಪಟ್ಟಿ ಮಾಡುವ ಕೆಲಸವನ್ನು ಒಪ್ಪಿಕೊಂಡಿದ್ದಾರೆ ಸುದ್ದೀಶ. ಇವರ ಬ್ಲಾಗ್ ಬೀಟ್‌ಗೆ ನಿಮ್ಮ ಬ್ಲಾಗೂ ಈಡಾಗಬೇಕೆಂಬ ಆಸೆಯಿದ್ದರೆ ನಿಮ್ಮ ಬ್ಲಾಗಿನ ವಿಳಾಸ ಕೊಟ್ಟು ನಮ್ಮ ವಿಳಾಸಕ್ಕೆ ಒಂದು ಮಿಂಚಂಚೆ ಕಳುಹಿಸಿ.

ಸಾಮ್ರಾಟರ ಬೀಟಿನ ಏಟಿಗೆ ಬಲಿಯಾದ ಮಿಕಗಳ್ಯಾವುವು ನೋಡೋಣ ಬನ್ನಿ…

‘ಕೆಂಡ ಸಂಪಿಗೆ’ಯ ಸುದ್ದಿಕ್ಯಾತ

ಕೃತಕ ಪ್ಲಾಸ್ಟಿಕ್ ಹೂವು ಕೇಳಿದ್ದೀರಿ, ಕೃತಕ ಹಣ್ಣು ಕೇಳಿದ್ದೀರಿ, ಕೃತಕ ಮಗು ಕೇಳಿದ್ದೀರಿ, ಕೃತಕ ಹೃದಯವನ್ನೂ ಕೇಳಿದ್ದೀರಿ ಆದರೆ ಕೃತಕ ಲೇಖಕ ಕಾದಂಬರಿ ಬರೆದದ್ದನ್ನು ಕೇಳಿದ್ದೀರಾ? ಇಂಥದ್ದೊಂದು ಸುದ್ದಿಯನ್ನು ಬೀಟಿನಲ್ಲಿ ಹಿಡಿದು ತಂದಿದ್ದಾನೆ ಸುದ್ದಿ ಕ್ಯಾತ. ಕಾಲ್ಪನಿಕ ಲೇಖಕ ಬರೆದ ಕಾಲ್ಪನಿಕ ಕೃತಿಗಳು ಪಡೆದ ಮನ್ನಣೆ, ಕೊನೆಗೆ ಅಸಲು ಲೇಖಕ ಬೆಳಕಿಗೆ ಬಂದು ತೆರಬೇಕಾದ ದಂಡದ ಬಗ್ಗೆ ಇಲ್ಲಿ ಮಾಹಿತಿಯಿದೆ.

ಆದರೆ ಬಾಟಮ್ ಕೆಳಗಿನ ಲೈನರ್‌ನಲ್ಲಿ ಕ್ಯಾತ “ಭೈರಪ್ಪನವರ ಆವರಣ ಕಾದಂಬರಿಯ ನಾಯಕಿ ಲಕ್ಷ್ಮಿ/ರಜಿಯಾ ಬರೆದ ಕಾದಂಬರಿ ಪ್ರಕಾಶನಗೊಂಡರೆ ಅದು ಆವರಣಕ್ಕಿಂತ ಹೆಚ್ಚು ಮಾರಾಟವಾಗುವುದೇ?” ಎನ್ನುವ ಮೂಲಕ ಕ್ಯಾತೆ ತೆಗೆಯುವುದನ್ನು ಮಾತ್ರ ಮರೆಯಲಿಲ್ಲ!

ಪಂಚ್ ಲೈನ್

ಕೋಮುವಾದದ ಸದ್ದಡಗಿಸುವ ಮಾತನ್ನು ಮಾಡುತ್ತಿದ್ದಾರೆ ಎಲ್ಲರೂ. ಆದರೆ ಕೋಮುವಾದವನ್ನು ಅಳಿಸಿ ಮಾನವೀಯತೆಯನ್ನು ಉಳಿಸುವುದು ಎಷ್ಟು ಸುಲಭ ಎಂದು ಪಂಚಿಸಿದ್ದಾರೆ ಗಣೇಶ್.

ಬೊಗಳೆ

ಬೊಗಳೂರು ಚುನಾವಣಾ ಬ್ಯೂರೋ ‘ಬೊಗಳೆ ಚುನಾವಣಾ ಪ್ರಣಾಳಶಿಶು ಬಿಡುಗಡೆ’ಮಾಡಿದೆ. ತನ್ನ ವಿರೋಧಿ ಪತ್ರಿಕೆಯಲ್ಲಿ ಪ್ರಕಟವಾಗಬೇಕಾದ ಜಾಹೀರಾತನ್ನು ಕದ್ದು, ಕೆರೆದು ಪ್ರಕಟಿಸಿದ್ದಾರೆ. ಅವರ ‘ಪ್ರಣಾಳಶಿಶು’ವಿನ ಸ್ಯಾಂಪಲ್ ನೋಡಿ ಇಲ್ಲಿ:

ಯಾವುದೇ ಸೌಲಭ್ಯಲ್ಲದ, ತೀರಾ ಹಿಂದುಳಿದ ಹಳ್ಳಿಗಳಿಗೆ ಕಲರ್ ಟಿವಿ. ಇದನ್ನು ಕೊಡಲು ಪ್ರಮುಖ ಕಾರಣವೆಂದರೆ ಕಲರ್ ಟೀವಿ ತರಬೇಕಿದ್ದರೆ ಅಲ್ಲಿಗೆ ರಸ್ತೆಯಾಗಬೇಕು, ಅದನ್ನು ನೋಡಬೇಕಿದ್ದರೆ ಕರೆಂಟು ಬೇಕು. ನಾವು ಇಲ್ಲಿಂದ ಎಷ್ಟರವರೆಗೆ ಆರಿಸಿಬರುತ್ತೇವೋ ಅಷ್ಟರವರೆಗೆ ರಸ್ತೆ, ಕರೆಂಟು ಇತ್ಯಾದಿ ವ್ಯವಸ್ಥೆ ಆಗುವುದು ಸಾಧ್ಯವಿಲ್ಲ. ಹೀಗಾಗಿ ಕಲರ್ ಟೀವಿಯನ್ನು ಕೊಂಡು ರಾಶಿ ಹಾಕುತ್ತೇವೆ. ಹರಾಜು ಕೂಡ ಹಾಕುತ್ತೇವೆ.

ಇಂಥ ಪ್ರಣಾಳಶಿಶುವನ್ನು ಕೊಟ್ಟರೆ ಮತದಾರರು ಅನಾಥರನ್ನಾಗಿ ಮಾಡುವುದಿಲ್ಲ ಎಂಬ ನಂಬಿಕೆ ಬರತೊಡಗಿದೆ. ಮರದ ಮೇಲಿನಿಂದ ಆಪಲ್ ಬಿದ್ದು ನ್ಯೂಟನ್ನನಿಗೆ ಗುರುತ್ವಾಕರ್ಷಣೆಯ ಬಗ್ಗೆ ಹೊಳೆದಂತೆ ಮುಂದೊಂದು ದಿನ ನಗೆ ಸಾಮ್ರಾಟರ ತಲೆಯ ಮೇಲೆ ತೆಂಗಿನ ಮರದಿಂದ ತೆಂಗಿನ ಕಾಯಿ ಬಿದ್ದು ಜ್ಞಾನೋದಯವಾಗಿ ಅವರು ಚುನಾವಣೆಯಲ್ಲಿ ನಿಲ್ಲುವ ತೀರ್ಮಾನ ಕೈಗೊಂಡರೆ ಇಂಥ ಭರ್ಜರಿ ‘ಪ್ರಣಾಳಶಿಶು’ಗಳಿಗೆ ಜನ್ಮ ನೀಡಲು ಬೊಗಳೆಯ ಕಿರಿಕಿರಿ ಸಂಪಾದಕನನ್ನು ಎತ್ತಿಹಾಕಿಕೊಂಡು ಬರಲು ತಮ್ಮ ಚೇಲ ಕುಚೇಲನನ್ನು ಅಟ್ಟಿದ್ದಾರೆ.

ಅಪಾರ

“ಅಳತೆ ಮೀರಿದರೆ ಆಪತ್ತು ಅಂತ ತಿಳಿದು ‘ಮದ್ಯಸಾರ’ವನ್ನು ಇಲ್ಲಿಗೆ ನಿಲ್ಲಿಸುತ್ತಿದ್ದೇನೆ. ಒಂದಷ್ಟು ಕತೆಗಳನ್ನು ಬರೆದು ನಂತರ ಏನೂ ಬರೆಯಲಾಗದೆ ಒದ್ದಾಡುತ್ತಿದ್ದ ನನಗೆ ಈ ಪುಟ್ಟ ಪದ್ಯಗಳ ಮೂಲಕ ಏನೇನೋ ಮರಳಿ ಸಿಕ್ಕಿದೆ; ಬರೆಯಬಹುದು ಎಂಬ ವಿಶ್ವಾಸವೂ ಸೇರಿದಂತೆ. ಬ್ಲಾಗಿಗೆ ನಿಯಮಿತವಾಗಿ ಓದುಗರನ್ನು ಸೆಳೆಯಲು ಸ್ವಾರಸ್ಯವಾದ ಮತ್ತು ಚುಟುಕಾದ ಏನಾದರೂ ಬೇಕು ಎಂಬ ಉದ್ದೇಶದಿಂದ ಶುರು ಮಾಡಿದ ಈ ಮದ್ಯದ ಕವಿತೆಗಳು ಇಷ್ಟೊಂದಾಗಬಹುದು ಎಂದು ನನಗೂ ಗೊತ್ತಿರಲಿಲ್ಲ. ಈಗ ನಿಲ್ಲಿಸಬೇಕು ಎಂದು ತೀರ್ಮಾನಿಸಿರುವಾಗ ಕುಡಿತವನ್ನು ಬಿಡುವಷ್ಟೇ ಕಷ್ಟವಾಗುತ್ತಿದೆ!”

ಎಂದು ಹೇಳಿ ನಮ್ಮಂತಹ ಅಸಂಖ್ಯ ಮದ್ಯಾಭಿಮಾನಿಗಳನ್ನು ಸಾರದಿಂದ ಮಂಚಿಸುವ ತೀರ್ಮಾನ ಮಾಡಿರುವ ಅಪಾರ ‘ಮದ್ಯಸಾರ’ ಪುಸ್ತಕವಾಗುತ್ತಿದೆ ಎಂದು ಹೇಳುವ ಮೂಲಕ ಹೊಸ ‘ಕಿಕ್’ ಕೊಟ್ಟಿದ್ದಾರೆ.

ಕಮೆಂಟಿಗಾಗಿ ಕಾದು ಕುಳಿತ ಸೋಸಿಲಿ ಚುನಾವಣೆಯ ಭರಾಟೆಯನ್ನು ಬಿಟ್ಟ ಕಣ್ಣುಗಳಿಂದ ಕಂಡು ಕಮೆಂಟ್ ಮಾಡಿದ್ದಾಳೆ. ಅದರದೊಂದು ಸ್ಯಾಂಪಲ್ಲು ಹೊತ್ತು ತಂದಿದ್ದಾರೆ ಬೀಟಿಗೆ ಹೋದ ಸಾಮ್ರಾಟರು:

ಇದೇ ವೇಳೆ ಜನರನ್ನು ತಮ್ಮ ಹಾಸ್ಯ’ಸುಧೆ’ಯಿಂದ ನಗೆ ಸಾಗರದಲ್ಲಿ ಮುಳುಗಿಸುವ ಟಿವಿ ಶೋ ಖ್ಯಾತಿಯ ಮಹಿಳೆಯೊಬ್ಬರು ಸಾಗರ ಕ್ಷೇತ್ರದಿಂದ ಪ್ರಮುಖ ಪಕ್ಷವೊಂದರ ಟಿಕೆಟ್ ಬೇಕು ಅಂತ ಗಲಾಟೆ ಶುರುಮಾಡಿರುವರಂತೆ. ಪಕ್ಷದವರು ಮೇಡಂರ ಟಿಕೆಟ್ ಬೇಡಿಕೆಯನ್ನೂ ಒಂದು ಜೋಕ್ ಎಂದು ಪರಿಗಣಿಸದಿರಲಿ ಎಂಬುದು ನಮ್ಮ ಸೀರಿಯಸ್ ಕಾಳಜಿ!

(ಕಳೆದ ವಾರದ ಬ್ಲಾಗ್ ಬೀಟ್)