Tag Archives: blog beat

ಬ್ಲಾಗ್ ಬೀಟ್ 22

18 ಜುಲೈ

 

ನಾವು ಮಾಡುವ ತಪ್ಪನ್ನು ನಮಗಿಂತಾ ಚೆನ್ನಾಗಿ ಯಾರ್ಯಾರು ಮಾಡಿದ್ದಾರೆ ಎಂದು ವಿವರವಾಗಿ ದಾಖಲಿಸುವ ಕಲೆಯನ್ನೇ ವಿಮರ್ಶೆ ಎನ್ನುವುದು. ನಮ್ಮ  ಪ್ರಮುಖ ಪತ್ರಿಕೆಗಳು ಇದನ್ನು ಮಿರ್ಚಿ, ಮಸಾಲಾ ಹೆಸರಿನಲ್ಲಿ ಮಾಡುತ್ತಿವೆ. ಪ್ರತಿ ಸಂಚಿಕೆಯಲ್ಲಿ ಇದನ್ನೇ ನಾವು ‘ಬ್ಲಾಗ್ ಬೀಟ್’ ಹೆಸರಿನಲ್ಲಿ ಮಾಡುತ್ತಿದ್ದೇವೆ.

ನಮ್ಮ ವಿಮರ್ಶೆಯ ಮೊನೆಗೆ ನಿಮ್ಮ ಬ್ಲಾಗೂ ತಾಕಬೇಕೆಂದಿದ್ದರೆ ಇಲ್ಲೊಂದು ಕಮೆಂಟ್ ಹಾಕಿ.

……………………..

ಬೊಗಳೆ

 

‘ಸ್ವಂತ ಮನೆ’ಯನ್ನು ಕಟ್ಟಿಕೊಳ್ಳುವುದರಲ್ಲಿ ಮಜಾವಾಣಿ ಆಯ್ತು ಈಗ ಬೊಗಳೆಯ ಸರದಿ! ನಾವಿನ್ನೂ ವರ್ಡ್ ಪ್ರೆಸ್ಸೆಂಬ ಮನೆ ಮಾಲೀಕನ ಮರ್ಜಿಯಲ್ಲಿ ಬದುಕುತ್ತಾ ಬಾಡಿಗೆ ಮನೆ ಸೊಗಸು ನೀವೇನು ಬಲ್ಲಿರಿ, ಈ ಜಗತ್ತೇ ಬಾಡಿಗೆ ಮನೆ, ಈ ದೇಹ ಬಾಡಿಗೆ ಮನೆ… ಬಾಡಿಗೆತನಕ್ಕೆಲ್ಲಿ ಕೊನೆ ಎಂದು ದೇವದಾಸ ಪದ ಹಾಡಿಕೊಳ್ಳುತ್ತಾ ಇದ್ದೇವೆ.

ಸ್ವಂತ ಮನೆ ಕಟ್ಟಿಕೊಂಡಿರುವ ಬೊಗಳೆಯಲ್ಲಿ ಎಂಪಿಗಳು ಎಮ್ಮೆಗಳಾಗಲು ಒಪ್ಪಲಿಲ್ಲವೇಕೆ ಎಂಬ ವರದಿಯಿದೆ.

ಮೋಟುಗೋಡೆ

 

ಮೋಟುಗೋಡೆಗೆ ಎದುರಾಗಿ ಚಲ್ಲಣವಿಲ್ಲದ ಚೋಟುಗಳನ್ನು ನಿಲ್ಲಿಸಿ ನೋಡಿಕೊಳ್ಳಿ ಎಂದು ಸವಾಲೆಸೆದು ತಲ್ಲಣ ಸೃಷ್ಟಿಸಿರುವ ಮೋಟುಗೋಡೆ ಬ್ಲಾಗಿನಲ್ಲಿ ಖ್ಯಾತರು ಮೋಟುಗೋಡೆಯನ್ನು ಜಿಗಿದು ಮಾಡಿದ ಸಾಹಸದ ದಾಖಲಾತಿ ಮುಂದುವರೆದಿದೆ. ಗಂಗಾಧರ ಚಿತ್ತಾಲರ, ಅಡಿಗರ ಗೋಡೆ ದಾಟಿದ ಸಾಹಸಗಳು ಇಲ್ಲಿವೆ

ಕೆಂಡಸಂಪಿಗೆ

 

ಮುದ್ರಣಕ್ಕೆ ಕಾಗದವನ್ನು ಬಳಸದ, ವರದಿಗಾರರಿಗೆ, ಬರಹಗಾರರಿಗೆ , ಅನಾಮಿಕ ಕಮೆಂಟುದಾರರಿಗೆ ಟಿಎ, ಡಿಎ, ಬಾಟಾ ಕೊಡದ   ಕೆಂಡಸಂಪಿಗೆಯಲ್ಲಿ ಕಾಸ್ಟ್ ಕಟಿಂಗ್ ನಡೆಯುತ್ತಿದೆಯಾ ಎಂಬ ಸಂಶಯ ಸಾಮ್ರಾಟರಿಗೆ ಬಂದಿದೆ.

ಜಗತ್ತಿನಾದ್ಯಂತ ಪತ್ರಿಕೆಗಳು ತಮ್ಮ ಹೆಚ್ಚುವರಿ ವರದಿಗಾರರನ್ನು, ಪ್ರೂಫ್ ತಿದ್ದುವ ಬುದ್ಧಿವಂತರನ್ನು ಮನೆಗೆ ಕಳಿಸುತ್ತಿದ್ದರೆ ಕೆಂ.ಸಂದಲ್ಲಿ ಅಪ್ರತಿಮ ವರದಿಗಾರ ಸುದ್ದಿ ಕ್ಯಾತನನ್ನೇ ಹೊರಗೆ ಅಟ್ಟಲಾಗಿದೆ.

ಈ ಬಗ್ಗೆ ಕೆಂ.ಸಂದ ಅತಿಥಿ ಸಂಪಾದಕರು ಕೊಂಚ ಗಮನ ಹರಿಸಲಿ ಎಂಬುದು ನಗೆ ಸಾಮ್ರಾಟರ ಕೋರಿಕೆ.

ಇನ್ನು ಅತಿಥಿ ಸಂಪಾದಕರ ಹೊಸತೊಂದು ಐಡಿಯಾ ಬಗ್ಗೆ ನಮ್ಮ ಸಂಪೂರ್ಣ ಬೆಂಬಲವಿದೆ.

ಬ್ಲಾಗ್ ಬೀಟ್ 21

2 ಜೂನ್

 

ಬಹು ದಿನಗಳ ನಂತರ ಬೀಟಿಗೆ ಹೊರಟ ಸಾಮ್ರಾಟರಿಗೆ ಭಾರಿ ನಿರಾಶೆ ಕಾದಿತ್ತು. ಅತ್ಯುತ್ತಮವಾದ ಫಸಲನ್ನು ನಿರೀಕ್ಷಿಸಿ ಕುಯಿಲಿಗೆ ಹೊರಟಿದ್ದವರಿಗೆ ಬರಡು ಭೂಮಿಯಂತಹ ಬ್ಲಾಗಿನಂಗಳ ಕಂಡು ದುಃಖವಾಯಿತು. ವಿದರ್ಭದ ಆಸುಪಾಸಿನಲ್ಲಿ ಓಡಾಡುತ್ತಿದ್ದರೆ ನೇಣು ಬಿಗಿದುಕೊಳ್ಳುವ ಅಪಾಯವಿತ್ತು. ಆದರೆ ಎಂದೂ ಕರ್ನಾಟಕದ ಅಂಗಳದಿಂದ ಕಾಲ್ಕಿತ್ತದ ಸಾಮ್ರಾಟರು ಬಚಾವಾದರು. ಕನ್ನಡದ ನೆಲದಲ್ಲಿ ಆಶಾವಾದಕ್ಕೆ ಕೊರತೆಯಿಲ್ಲ ಎಂದು ತಮ್ಮನ್ನು ತಾವು ಸಮಾಧಾನಿಸಿಕೊಂಡು ಸಿಕ್ಕ ಒಂದೆರಡು ಕಾಳುಗಳನ್ನು ಹೆಕ್ಕಿ ತಂದು ಸುರಿದಿದ್ದಾರೆ.

ಬೊಗಳೆ

ಎಲ್ಲೇ ಯಾವುದಕ್ಕೆ ಬರಗಾಲವಿದ್ದರೂ ಬ್ಲಾಗಿನ ಅಂಗಳದಲ್ಲಿ ಬೊಗಳೆಗೆ ಬರಗಾಲವಿಲ್ಲವೆನ್ನುವುದನ್ನು ಅನ್ವೇಷಿಯವರು ಸತತವಾಗಿ ಸಾಬೀತು ಪಡಿಸಿಕೊಂಡು ಬರುತ್ತಿದ್ದಾರೆ. ತಮ್ಮ ಇತ್ತೀಚಿನ ವರದಿಯಲ್ಲಿ ತಮಿಳು ನಾಡಿನಲ್ಲಿನ ಚುನಾವಣೋತ್ತರ ಸನ್ನಿವೇಶವನ್ನು ತೆರೆದಿಟ್ಟಿದ್ದಾರೆ.

ತಮಿಳುಕಾಡಿನ ಪ್ರಥಮ ಕುಟುಂಬವು ತನ್ನೆಲ್ಲಾ ಶಕ್ತಿ-ಸಾಮರ್ಥ್ಯ-ಜನಬಲ-ಕುಟುಂಬ ಬಲಗಳನ್ನೆಲ್ಲವನ್ನೂ ದೆಹಲಿಗೆ ವರ್ಗಾಯಿಸಿರುವ ಕಾರಣದಿಂದಾಗಿ ತಮಿಳುಕಾಡು ಬಿಕೋ ಎನ್ನುತ್ತಿದ್ದ ಘಟನೆಯೊಂದು ಯಾರಿಗೂ ತಿಳಿಯದಂತೆ ಘಟಿಸಿದ್ದು, ಅದನ್ನು ಬೊಗಳೂರು ವರದ್ದಿಗಾರರು ಪತ್ತೆ ಹಚ್ಚಿರುವುದಾಗಿ ಅನ್ಯ ಪತ್ರಿಕೆಗಳಲ್ಲಿ ವರದ್ದಿಯಾಗಿದೆ.

ಮೋಟು ಗೋಡೆ

ಗೋಡೆಯ ಆಚೆ ಈ ಬಾರಿ ಸಾಮ್ರಾಟರಿಗೆ ಎದುರಾಗಿದ್ದು ಸಲಿಂಗಿ ಜೋಡಿಗಳ ವಿಷಯ. ಈ ಸಂಗತಿಯ ಬಗ್ಗೆ ಜಗತ್ತೇ ತಲೆ ಕೆಡಿಸಿಕೊಂಡು ಒದ್ದಾಡುತ್ತಿರುವಾಗ ಸಾಮ್ರಾಟರು ಸರಳವಾದ ಸೂತ್ರವನ್ನು ಹಾಕಿ ಸಮಸ್ಯೆಯನ್ನು ಪರಿಹರಿಸಿದ್ದಾರೆ.
ಅ=ಸಾಹಿತ್ಯಕ್ಕೆ ಹೆಣ್ಣು ಗಂಡೆಂಬ ಬೇಧವಿಲ್ಲ
ಬ= ಪ್ರೀತಿ ಮಾಡ ಬಾರದು ಮಾಡಿದರೆ ಜಗಕೆ ಹೆದರಬಾರದು ಎಂಬುದು ಉತ್ತಮ ಸಾಹಿತ್ಯ
ಕ= ಪ್ರೀತಿಗೆ ಗಂಡು ಹೆಣ್ಣೆಂಬ ಬೇಧವಿಲ್ಲ

ಪ್ರೀತಿಸುವಾಗ ತೊಂದರೆಯಿಲ್ಲ ಆದರೆ ಮದುವೆಯಾದ ನಂತರ ಒಂದೊಂದೇ ತೊಂದರೆ ಶುರುವಾಗುತ್ತೆ. ಮದುವೆಯಾಗುವವರು ಗಂಡು ಹೆಣ್ಣು ಮಾತ್ರ ಎಂಬ ತಪ್ಪು ಅಭಿಪ್ರಾಯದಿಂದಾಗಿ ಗಂಡ, ಹೆಂಡತಿ, ಅಪ್ಪ, ಅಮ್ಮ ಎಂಬಂತಹ ಸಂಬಂಧಗಳು ಗಟ್ಟಿಯಾದವು. ಈಗ ಇಬ್ಬರು ಒಂದೇ ಲಿಂಗಿಗಳು ಮದುವೆಯಾದರೆ…

ಆದರೆ ಅವರು ಹೆದರಬೇಕಿಲ್ಲ. ಜಗತ್ತಿನಲ್ಲಿ ಯಾವುದ್ಯಾವುದಕ್ಕೋ ಕ್ರಾಂತಿಯಾಗಿದೆ. ಹೀಗಿರುವಾಗ ಗಂಡ ಹೆಂಡತಿ ಎಂಬ ಪದಗಳ ವಿಚಾರದಲ್ಲಿ ಕ್ರಾಂತಿ ಮಾಡುವುದಕ್ಕೆ ಯಾಕೆ ಹಿಂಜರಿಕೆ.

ಬ್ಲಾಗ್ ಬೀಟ್ 17

18 ನವೆಂ

ಕನ್ನಡದ ಬ್ಲಾಗುಗಳ ಲೋಕದಲ್ಲಿ ವಿಡಂಬನೆ, ಫೇಕ್ ನ್ಯೂಸ್, ಕಾಲೆಳೆಯುವಿಕೆ, ನವಿರಾದ ಹಾಸ್ಯ, ವಕ್ರತುಂಡೊಕ್ತಿ ಯಾವುದಕ್ಕೂ ಕೊರತೆಯಿಲ್ಲ. ವಾರಕ್ಕೊಂದು ಬಾರಿ ಕನ್ನಡದ ಬ್ಲಾಗು ತೋಟವನ್ನು ಹೊಕ್ಕು ಅಲ್ಲಿನ ರಸವತ್ತಾದ ಬರಹಗಳನ್ನು ಹೆಕ್ಕಿ ತಂದು ಪಟ್ಟಿ ಮಾಡುವ ಕೆಲಸವನ್ನು ಒಪ್ಪಿಕೊಂಡಿದ್ದಾರೆ ನಗೆಸಾಮ್ರಾಟ್. ಇವರ ಬ್ಲಾಗ್ ಬೀಟ್‌ಗೆ ನಿಮ್ಮ ಬ್ಲಾಗೂ ಈಡಾಗಬೇಕೆಂಬ ಆಸೆಯಿದ್ದರೆ ನಿಮ್ಮ ಬ್ಲಾಗಿನ ವಿಳಾಸ ಕೊಟ್ಟು ನಮ್ಮ ವಿಳಾಸಕ್ಕೆ ಒಂದು ಮಿಂಚಂಚೆ ಕಳುಹಿಸಿ.

……………………………………………………..

ಬೊಗಳೆ ರಗಳೆ

ಕೈ ಪಕ್ಷದಲ್ಲಿ ಟಿಕೇಟುಗಳು ಬಿಕರಿಯಾಗುತ್ತಿವೆ ಎಂಬ ಸತ್ಯವನ್ನು ಜಗಜ್ಜಾಹೀರು ಮಾಡಿ ಪಕ್ಷದಿಂದ ಗೇಟ್ ಪಾಸ್ ಪಡೆದರು ಮಾರ್ಗರೇಟ್ ಆಳ್ವಾ. ಟಿಕೆಟುಗಳು ಎಲ್ಲೆಲ್ಲಿ ಯಾವ ಬೆಲೆಗೆ ಮಾರಾಟವಾಗುತ್ತಿವೆ ಎಂಬುದನ್ನು ಪತ್ತೆ ಹಚ್ಚುವುದಕ್ಕಾಗಿ ಕಾಂಗೈ ಪಾರ್ಟಿಯವರು ಬೊಗಳೆ ರಗಳೆಯ ಅಸತ್ಯ ಅನ್ವೇಷಿಯವರನ್ನು ತನಿಖೆ ಮಾಡಲು ಕೋರಿಕೊಂಡರಂತೆ. ಅವರ ವರದಿ ಇಲ್ಲಿದೆ. ನಮ್ಮ ಜಗದ್ವಿಖ್ಯಾತ ಡಿಟೆಕ್ಟಿವ್ ಕುಚೇಲನ ಕಣ್ತಪ್ಪಿಸಿ ಈ ಕೇಸು ಅಸತ್ಯ ಅನ್ವೇಷಿಯವರ ಪಾಲಾದದ್ದು ಹೇಗೆ ಎನ್ನುವುದನ್ನು ಪತ್ತೆ ಹಚ್ಚುವುದಕ್ಕೆ ಸಾಮ್ರಾಟರು ಒಂದು ತನಿಖಾ ಮಂಡಳಿ ರಚಿಸುವಲ್ಲಿ ಬ್ಯುಸಿಯಾಗಿದ್ದಾರೆ.

ಪಂಚ್ ಲೈನ್

ಚಿತ್ರ ವಿಚಿತ್ರ ಪಂಚುಗಳನ್ನು ಓದುಗರೆಡೆಗೆ ರವಾನಿಸುವಲ್ಲಿ ಜಗತ್ವಿಖ್ಯಾತರಾಗಿರುವ ಗಣೇಶರು ಇತ್ತೀಚೆಗೆ ಹುಡುಗ ಹುಡುಗಿಯರ ನಡುವಿನ ಕೆಮಿಸ್ಟ್ರಿ, ಬಯಲಾಜಿ, ಫಿಸಿಕ್ಸು, ಲಾಜಿಕ್ಕು, ಮ್ಯಾಥಮ್ಯಾಟಿಕ್ಸುಗಳಲ್ಲಿ ಆಸಕ್ತಿ ತಳೆದಿರುವಂತಿದೆ.
ಇತ್ತೀಚಿನ ಅವರ ಪಂಚುಗಳೇ ಅದಕ್ಕೆ ಸಾಕ್ಷಿ:
ಹುಡುಗಿಯರೆಂದರೆ ಯಾರು?
ಗೊತ್ತಾಗದ ಪ್ರಶ್ನೆ… ಹುಡುಗರು ಹುಡುಗೀರು ಏನು ಮಾಡ್ತಾರೆ?

ಪ್ರಕಾಶ್ ಶೆಟ್ಟಿ ಪಂಚ್

ಪ್ರಕಾಶ್ ಶೆಟ್ಟಿಯವರು ಓರೆ ಕೋರೆಯ ತಯಾರಿಯಲ್ಲಿ ಫುಲ್ ಬ್ಯುಸಿಯಾಗಿರುವಂತಿದೆ. ಅವರ ಬ್ಲಾಗು ಅವರ ಗೆರೆಗಳ ಪಂಚಿಲ್ಲದೆ ಪೇಲವವಾಗಿದೆ.
ಶೀಘ್ರದಲ್ಲಿಯೇ ತಮ್ಮ ಬ್ಲಾಗಿನಲ್ಲಿ ತಮ್ಮ ಪತ್ರಿಕೆಯ ಪ್ರಾಯೋಗಿಕ ಪ್ರತಿಯನ್ನು ಪ್ರಕಟಿಸುತ್ತೇವೆ ಎಂದು ಪ್ರಾಮಿಸ್ ಮಾಡಿರುವ ಶೆಟ್ಟಿಯವರು ನಗೆ ಸಾಮ್ರಾಟರನ್ನು ತುದಿಗಾಲಲ್ಲಿ ನಿಲ್ಲುವಂತೆ ಮಾಡಿದ್ದಾರೆ. ಅಲ್ಲದೆ ಪ್ರಕಾಶ್ ಶೆಟ್ಟಿಯವರು ಗೌಡರನ್ನು ನಗಿಸುವ ಶಪತ ಕೈಗೊಂಡಿರುವುದರಿಂದ ಸಾಮ್ರಾಟರ ಚೇಲ ಕುಚೇಲ ಗೌಡರು ನಗುತ್ತಾರೋ ಇಲ್ಲವೇ ಕಂಪ್ಯೂಟರಿನಲ್ಲಿ ನಗುವಂತೆ ಗ್ರಾಫಿಕ್ಸ್ ಮಾಡಲಾಗುತ್ತದೆಯೋ ಎಂದು ಪತ್ತೇ ಹಚ್ಚಲು ತಯಾರಾಗಿ ನಿಂತಿದ್ದಾನೆ.

ಕೆಂಡಸಂಪಿಗೆಯ ಸುದ್ದಿ ಕ್ಯಾತ

ಸತ್ತ ನಂತರ ನಿಮ್ಮ ಚಿತಾ ಭಸ್ಮವನ್ನು ಚಂದ್ರನಲ್ಲಿಗೆ ತೆಗೆದುಕೊಂಡು ಹೋಗುವ ಯೋಜನೆಯನ್ನು ಕಂಪೆನಿಯೊಂದು ಹಾಕಿಕೊಂಡಿದ್ದು ಸುದ್ದಿ ಕ್ಯಾತರು ಕರ್ನಾಟಕದಲ್ಲಿನ ಕಾಂಟ್ರ್ಯಾಕ್ಟನ್ನು ಗಿಟ್ಟಿಸಿಕೊಂಡಿದ್ದಾರೆ.
ಮುಂದಿನದನ್ನು ಅವರ ಮಾತಲ್ಲೇ ಕೇಳಿ:  “
ಸಾಯುವ ಮೊದಲು ಬುಕ್ಕಿಂಗ್ ಮಾಡಿಸಿದರೆ ರಿಯಾಯತಿ ಕೂಡ ಲಭ್ಯವಿದೆ. ಸತ್ತ ನಂತರ ಅಡ್ರೆಸ್ ಇಲ್ಲದ ಆತ್ಮಗಳಾಗಿ ಈ ಭೂಮಿಯಲ್ಲಿ ಅಲೆಯುವ ಬದಲು ನೇರವಾಗಿ ಸ್ವರ್ಗವನ್ನು ಸೇರಿಸಿಕೊಳ್ಳಲು ಈ ಯೋಜನೆಯ ಸದುಪಯೋಗ ಯಾಕೆ ಪಡೆದುಕೊಳ್ಳಬಾರದು. ಆಸಕ್ತರು ಮೇಲ್ಕಾಣಿಸಿದ ವಿವರಗಳೊಂದಿಗೆ ಮುಂಗಡ ಬುಕ್ಕಿಂಗ್ ಗಾಗಿ ಸುದ್ದಿಕ್ಯಾತರನ್ನು ಸಂಪರ್ಕಿಸಬಹುದು.”
ಸಾಮ್ರಾಟರು ಈಗಾಗಲೇ ಮುಂಗಡ ಬುಕ್ಕಿಂಗ್ ಮಾಡಿಸಿಯಾಗಿದೆ, ಎಷ್ಟಾದರೂ ಒಮ್ಮೆ ಆತ್ಮಹತ್ಯೆ ಮಾಡಿಕೊಂಡು ಪುನರ್ಜನ್ಮ ಪಡೆದು ಬಂದವರಲ್ಲವೇ? ಅನುಭವ ಹೆಚ್ಚು!

ಬ್ಲಾಗ್ ಬೀಟ್ 14

1 ಸೆಪ್ಟೆಂ

ಕನ್ನಡದ ಬ್ಲಾಗುಗಳ ಲೋಕದಲ್ಲಿ ವಿಡಂಬನೆ, ಫೇಕ್ ನ್ಯೂಸ್, ಕಾಲೆಳೆಯುವಿಕೆ, ನವಿರಾದ ಹಾಸ್ಯ, ವಕ್ರತುಂಡೊಕ್ತಿ ಯಾವುದಕ್ಕೂ ಕೊರತೆಯಿಲ್ಲ. ವಾರಕ್ಕೊಂದು ಬಾರಿ ಕನ್ನಡದ ಬ್ಲಾಗು ತೋಟವನ್ನು ಹೊಕ್ಕು ಅಲ್ಲಿನ ರಸವತ್ತಾದ ಬರಹಗಳನ್ನು ಹೆಕ್ಕಿ ತಂದು ಪಟ್ಟಿ ಮಾಡುವ ಕೆಲಸವನ್ನು ಒಪ್ಪಿಕೊಂಡಿದ್ದಾರೆ ನಗೆಸಾಮ್ರಾಟ್. ಇವರ ಬ್ಲಾಗ್ ಬೀಟ್‌ಗೆ ನಿಮ್ಮ ಬ್ಲಾಗೂ ಈಡಾಗಬೇಕೆಂಬ ಆಸೆಯಿದ್ದರೆ ನಿಮ್ಮ ಬ್ಲಾಗಿನ ವಿಳಾಸ ಕೊಟ್ಟು ನಮ್ಮ ವಿಳಾಸಕ್ಕೆ ಒಂದು ಮಿಂಚಂಚೆ ಕಳುಹಿಸಿ.

……………………………………………………..

ಮಜಾವಾಣಿ ಪಲಾಯನ

ಬ್ಲಾಗ್ ಸ್ಪಾಟಿನ ಅಂಗಳದಿಂದ ಮಜಾವಾಣಿ ಎಂಬ ವಸ್ತು ನಿಷ್ಟ ಪತ್ರಿಕೆ ಪಲಾಯನ ಗೈದಿದ್ದು ಇದರಲ್ಲಿ ನಮ್ಮ ಕೈವಾಡವೇನೂ ಇಲ್ಲ ಎಂದು ಬೊಗಳೆ ಬ್ಯೂರೋ ನೀಡಿದ ಸ್ಪಷ್ಟನೆ ಎಲ್ಲೂ ಪ್ರಕಟವಾಗಿಲ್ಲ.
ತನ್ನದೇ ಆದ ತಾಣವನ್ನು ತೆರೆದುಕೊಂಡು ಸಂಪದದ ಶಾಮಿಯಾನದಲ್ಲಿ ಅಂಗಡಿ ತೆರೆದಿರುವ ‘ಮಜಾವಾಣಿ’ ತನ್ನ ಪ್ರತಿಸ್ಪರ್ಧಿ ಪತ್ರಿಕೆಗಳಿಗಿಂತ ಗಾವುದ ದೂರ ಓಡಿ ತನಗೆ ಉಸೇನ್ ಬೋಲ್ಟ್ ಆದರ್ಶ ಎಂಬುದನ್ನು ಸಾಬೀತು ಪಡಿಸಿದೆ. ಇಷ್ಟೇ ವೇಗವಾಗಿ ಓಡುತ್ತಿದ್ದರೆ ಪ್ರತಿಸ್ಪರ್ಧಿಗಳು ಮುನಿಸಿಕೊಂಡು ರೇಸಿನಿಂದಲೇ ಹಿಂದಕ್ಕೆ ಸರಿಯಬಹುದು ಎಂಬ ಎಚ್ಚರಿಕೆಯನ್ನು ನಗೆಸಾಮ್ರಾಟರು ರವಾನಿಸಿದ್ದಾರೆ!

ಬೊಗಳೆ

ಬ್ಲಾಗು ಎಂಬುದನ್ನು ಕನ್ನಡದಲ್ಲಿ ಏನೆಂದು ಕರೆಯಬೇಕು ಎಂಬುದಕ್ಕೆ ಉತ್ತಮವಾದ ಜನಾಭಿಪ್ರಾಯವನ್ನು ಮೂಡಿಸುವಲ್ಲಿ, ಜನರ ಕೆನ್ನೆಗೆ ಬೆಣ್ಣೆ ತಿಕ್ಕಿ ತಮ್ಮ ಪತ್ರಿಕೆಯ ಹೆಸರೇ ಅದಕ್ಕೆ ಸೂಚಿತವಾಗುವಂತೆ ಮಷ್ಕಿರಿ ಮಾಡುವಲ್ಲಿ ಅಸತ್ವ ಅನ್ವೇಷಿಗಳು ಯಶಸ್ವಿಯಾಗಿದ್ದಾರೆ. ಬ್ಲಾಗೆಂಬ ಒಲಿಂಪಿಕ್ಸಿನಲ್ಲಿ ಒಂದೊಂದು ಪತ್ರಿಕೆ ಒಂದೊಂದು ಸಾಧನೆ ಮಾಡುತ್ತಿದ್ದರೂ ನಗೆಸಾಮ್ರಾಟರು ಏನನ್ನೂ ಮಾಡದೆ ಸುಮ್ಮನಿದ್ದು ಮಾಡಿರುವ ಸಾಧನೆಯನ್ನು ಯಾರೂ ನೆನೆಸಿಕೊಳ್ಳುತ್ತಿಲ್ಲ ಎಂದು ಅವರ ಅಭಿಮಾನಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಮಧ್ಯೆ ಬೀಜಿಂಗಿಗೆ ತೆರಳದ ಸುದ್ದಿ ಮೂಲಗಳಿಂದ ತರಿಸಿಕೊಂಡ ವರದಿಯ ಪ್ರಕಾರ ಬೀಜಿಂಗಿನಲ್ಲಿ ಎಂಟು ಬಂಗಾರದ ಪದಕಗಳನ್ನು ನುಂಗಿದ ಮೀನನ್ನು ಅಮೇರಿಕಾಕ್ಕೆ ವಾಪಸ್ಸು ಕಳುಹಿಸಿದ ವರದಿಯನ್ನು ಪ್ರಕಟಿಸಿದೆ.

ಕೆಂಡಸಂಪಿಗೆಯ ಸುದ್ದಿಕ್ಯಾತ

ಹುಡುಗರೇ ನೀವು ಎಷ್ಟಾದರೂ ಮಂದಿ ಹುಡುಗಿಯರನ್ನು ಗರ್ಲ್‌ಫ್ರೆಂಡ್‌ಗಳಾಗಿ ಹೊಂದಿರಿ, ಅವರಿಗೆ ಎಷ್ಟಾದರೂ ಮಿಸ್ ಕಾಲ್ ಕೊಡಿ ಇಲ್ಲವೇ ಸ್ವೀಕರಿಸಿ ಆದರೆ ಮೆಸೇಜು ಮಾತ್ರ ಮಾಡಬೇಡಿ. ಹಾಗೊಂದು ವೇಳೆ ನೀವು ಮೇಸೇಜು ಮಾಡಿದರೆ ನಿಮಗೇ ಆಪತ್ತು ಎಂದು ಸರ್ವೆ ತಿಳಿಸಿದ ಸಂಗತಿಯನ್ನು ಸುದ್ದಿ ಕ್ಯಾತ ವರದಿ ಮಾಡಿದ್ದಾನೆ,
ಇತ್ತೀಚೆಗೆ ಈಸೋಪನ ಕಥೆಗಳಂತೆ ತನ್ನ ಪ್ರತಿಯೊಂದು ವರದಿಗೂ ನೀತಿಯನ್ನು ಕೊಡಮಾಡುತ್ತಿರುವ ಸುದ್ದಿ ಕ್ಯಾತ ಈ ವರದಿಗೆ ಕೊಟ್ಟ ನೀತಿ: ಹುಡುಗಿಯರು ಹತ್ತಿರ ಇದ್ದರೆ ಮೊಬೈಲ್ ಹೊರತೆಗೆಯಬೇಡಿ.

ಪಂಚ್ ಲೈನ್

ಬಿಜೆಪಿಯವರು ಏನೇನನ್ನೋ ಗಾಳಿಗೆ ತೂರಿ ಮತ್ತೇನನ್ನೋ ಹಿಡಿದುಕೊಳ್ಳುತ್ತಾರೆ ಎಂದು ಮರ್ಮಾಘಾತುಕಕಾರಿ ಪಂಚನ್ನು ಕೊಟ್ಟಿದ್ದ ಗಣೇಶ್ ಹಠಾತ್ತನೆ ಬ್ಲಾಗಿನ ಅಂಗಳದಿಂದ ಮರೆಯಾಗಿಬಿಟ್ಟಿದ್ದಾರೆ.
ನಗೆ ಸಾಮ್ರಾಟರು ನಮ್ಮ ಪಂಚಿನ ಚಾಂಪಿಯನ್ ಗಣೇಶರನ್ನು ಇತರ ದೇಶದವರು ಅಪಹರಿಸಿ ಒಲಿಂಪಿಕ್ಕಿನಲ್ಲಿ ಪಂಚಿಸಿ ಚಿನ್ನ ಗೆದ್ದು ತರಲು ಕಳುಹಿಸಿದ್ದಾರೇನೋ ಎಂದು ಸಂಶಯಿಸಿದ್ದರು. ಇದನ್ನು ಪತ್ತೇ ಹಚ್ಚಲು ತಮ್ಮ ಚೇಲ ಕುಚೇಲನನ್ನು ಅಟ್ಟಿದ್ದರು. ಆದರೆ ಪಂಚು ಕೊಡುವುದರಲ್ಲಿ ಚಿನ್ನವಿರಲಿ ತಗಡೂ ಸಹ ಗಣೇಶ್‌ಗೆ ಒಲಿಯದಿದ್ದುದರಿಂದ ಸಾಮ್ರಾಟರು ನೆಮ್ಮದಿಯಾಗಿದ್ದಾರೆ.

ಬ್ಲಾಗ್ ಬೀಟ್ 12

1 ಆಗಸ್ಟ್

ಕನ್ನಡದ ಬ್ಲಾಗುಗಳ ಲೋಕದಲ್ಲಿ ವಿಡಂಬನೆ, ಫೇಕ್ ನ್ಯೂಸ್, ಕಾಲೆಳೆಯುವಿಕೆ, ನವಿರಾದ ಹಾಸ್ಯ, ವಕ್ರತುಂಡೊಕ್ತಿ ಯಾವುದಕ್ಕೂ ಕೊರತೆಯಿಲ್ಲ. ವಾರಕ್ಕೊಂದು ಬಾರಿ ಕನ್ನಡದ ಬ್ಲಾಗು ತೋಟವನ್ನು ಹೊಕ್ಕು ಅಲ್ಲಿನ ರಸವತ್ತಾದ ಬರಹಗಳನ್ನು ಹೆಕ್ಕಿ ತಂದು ಪಟ್ಟಿ ಮಾಡುವ ಕೆಲಸವನ್ನು ಒಪ್ಪಿಕೊಂಡಿದ್ದಾರೆ ನಗೆಸಾಮ್ರಾಟ್. ಇವರ ಬ್ಲಾಗ್ ಬೀಟ್‌ಗೆ ನಿಮ್ಮ ಬ್ಲಾಗೂ ಈಡಾಗಬೇಕೆಂಬ ಆಸೆಯಿದ್ದರೆ ನಿಮ್ಮ ಬ್ಲಾಗಿನ ವಿಳಾಸ ಕೊಟ್ಟು ನಮ್ಮ ವಿಳಾಸಕ್ಕೆ ಒಂದು ಮಿಂಚಂಚೆ ಕಳುಹಿಸಿ.

ಓದನ್ನು ಮುಂದುವರೆಸಿ

ಬ್ಲಾಗ್ ಬೀಟ್ 8

6 ಮೇ

ಕನ್ನಡದ ಬ್ಲಾಗುಗಳ ಲೋಕದಲ್ಲಿ ವಿಡಂಬನೆ, ಫೇಕ್ ನ್ಯೂಸ್, ಕಾಲೆಳೆಯುವಿಕೆ, ನವಿರಾದ ಹಾಸ್ಯ, ವಕ್ರತುಂಡೊಕ್ತಿ ಯಾವುದಕ್ಕೂ ಕೊರತೆಯಿಲ್ಲ. ವಾರಕ್ಕೊಂದು ಬಾರಿ ಕನ್ನಡದ ಬ್ಲಾಗು ತೋಟವನ್ನು ಹೊಕ್ಕು ಅಲ್ಲಿನ ರಸವತ್ತಾದ ಬರಹಗಳನ್ನು ಹೆಕ್ಕಿ ತಂದು ಪಟ್ಟಿ ಮಾಡುವ ಕೆಲಸವನ್ನು ಒಪ್ಪಿಕೊಂಡಿದ್ದಾರೆ ಸುದ್ದೀಶ. ಇವರ ಬ್ಲಾಗ್ ಬೀಟ್‌ಗೆ ನಿಮ್ಮ ಬ್ಲಾಗೂ ಈಡಾಗಬೇಕೆಂಬ ಆಸೆಯಿದ್ದರೆ ನಿಮ್ಮ ಬ್ಲಾಗಿನ ವಿಳಾಸ ಕೊಟ್ಟು ನಮ್ಮ ವಿಳಾಸಕ್ಕೆ ಒಂದು ಮಿಂಚಂಚೆ ಕಳುಹಿಸಿ.

ಓದನ್ನು ಮುಂದುವರೆಸಿ

ಬ್ಲಾಗ್ ಬೀಟ್ 7

26 ಏಪ್ರಿಲ್

ಕನ್ನಡದ ಬ್ಲಾಗುಗಳ ಲೋಕದಲ್ಲಿ ವಿಡಂಬನೆ, ಫೇಕ್ ನ್ಯೂಸ್, ಕಾಲೆಳೆಯುವಿಕೆ, ನವಿರಾದ ಹಾಸ್ಯ, ವಕ್ರತುಂಡೊಕ್ತಿ ಯಾವುದಕ್ಕೂ ಕೊರತೆಯಿಲ್ಲ. ವಾರಕ್ಕೊಂದು ಬಾರಿ ಕನ್ನಡದ ಬ್ಲಾಗು ತೋಟವನ್ನು ಹೊಕ್ಕು ಅಲ್ಲಿನ ರಸವತ್ತಾದ ಬರಹಗಳನ್ನು ಹೆಕ್ಕಿ ತಂದು ಪಟ್ಟಿ ಮಾಡುವ ಕೆಲಸವನ್ನು ಒಪ್ಪಿಕೊಂಡಿದ್ದಾರೆ ಸುದ್ದೀಶ. ಇವರ ಬ್ಲಾಗ್ ಬೀಟ್‌ಗೆ ನಿಮ್ಮ ಬ್ಲಾಗೂ ಈಡಾಗಬೇಕೆಂಬ ಆಸೆಯಿದ್ದರೆ ನಿಮ್ಮ ಬ್ಲಾಗಿನ ವಿಳಾಸ ಕೊಟ್ಟು ನಮ್ಮ ವಿಳಾಸಕ್ಕೆ ಒಂದು ಮಿಂಚಂಚೆ ಕಳುಹಿಸಿ.

ಸಾಮ್ರಾಟರ ಬೀಟಿನ ಏಟಿಗೆ ಬಲಿಯಾದ ಮಿಕಗಳ್ಯಾವುವು ನೋಡೋಣ ಬನ್ನಿ…

‘ಕೆಂಡ ಸಂಪಿಗೆ’ಯ ಸುದ್ದಿಕ್ಯಾತ

ಕೃತಕ ಪ್ಲಾಸ್ಟಿಕ್ ಹೂವು ಕೇಳಿದ್ದೀರಿ, ಕೃತಕ ಹಣ್ಣು ಕೇಳಿದ್ದೀರಿ, ಕೃತಕ ಮಗು ಕೇಳಿದ್ದೀರಿ, ಕೃತಕ ಹೃದಯವನ್ನೂ ಕೇಳಿದ್ದೀರಿ ಆದರೆ ಕೃತಕ ಲೇಖಕ ಕಾದಂಬರಿ ಬರೆದದ್ದನ್ನು ಕೇಳಿದ್ದೀರಾ? ಇಂಥದ್ದೊಂದು ಸುದ್ದಿಯನ್ನು ಬೀಟಿನಲ್ಲಿ ಹಿಡಿದು ತಂದಿದ್ದಾನೆ ಸುದ್ದಿ ಕ್ಯಾತ. ಕಾಲ್ಪನಿಕ ಲೇಖಕ ಬರೆದ ಕಾಲ್ಪನಿಕ ಕೃತಿಗಳು ಪಡೆದ ಮನ್ನಣೆ, ಕೊನೆಗೆ ಅಸಲು ಲೇಖಕ ಬೆಳಕಿಗೆ ಬಂದು ತೆರಬೇಕಾದ ದಂಡದ ಬಗ್ಗೆ ಇಲ್ಲಿ ಮಾಹಿತಿಯಿದೆ.

ಆದರೆ ಬಾಟಮ್ ಕೆಳಗಿನ ಲೈನರ್‌ನಲ್ಲಿ ಕ್ಯಾತ “ಭೈರಪ್ಪನವರ ಆವರಣ ಕಾದಂಬರಿಯ ನಾಯಕಿ ಲಕ್ಷ್ಮಿ/ರಜಿಯಾ ಬರೆದ ಕಾದಂಬರಿ ಪ್ರಕಾಶನಗೊಂಡರೆ ಅದು ಆವರಣಕ್ಕಿಂತ ಹೆಚ್ಚು ಮಾರಾಟವಾಗುವುದೇ?” ಎನ್ನುವ ಮೂಲಕ ಕ್ಯಾತೆ ತೆಗೆಯುವುದನ್ನು ಮಾತ್ರ ಮರೆಯಲಿಲ್ಲ!

ಪಂಚ್ ಲೈನ್

ಕೋಮುವಾದದ ಸದ್ದಡಗಿಸುವ ಮಾತನ್ನು ಮಾಡುತ್ತಿದ್ದಾರೆ ಎಲ್ಲರೂ. ಆದರೆ ಕೋಮುವಾದವನ್ನು ಅಳಿಸಿ ಮಾನವೀಯತೆಯನ್ನು ಉಳಿಸುವುದು ಎಷ್ಟು ಸುಲಭ ಎಂದು ಪಂಚಿಸಿದ್ದಾರೆ ಗಣೇಶ್.

ಬೊಗಳೆ

ಬೊಗಳೂರು ಚುನಾವಣಾ ಬ್ಯೂರೋ ‘ಬೊಗಳೆ ಚುನಾವಣಾ ಪ್ರಣಾಳಶಿಶು ಬಿಡುಗಡೆ’ಮಾಡಿದೆ. ತನ್ನ ವಿರೋಧಿ ಪತ್ರಿಕೆಯಲ್ಲಿ ಪ್ರಕಟವಾಗಬೇಕಾದ ಜಾಹೀರಾತನ್ನು ಕದ್ದು, ಕೆರೆದು ಪ್ರಕಟಿಸಿದ್ದಾರೆ. ಅವರ ‘ಪ್ರಣಾಳಶಿಶು’ವಿನ ಸ್ಯಾಂಪಲ್ ನೋಡಿ ಇಲ್ಲಿ:

ಯಾವುದೇ ಸೌಲಭ್ಯಲ್ಲದ, ತೀರಾ ಹಿಂದುಳಿದ ಹಳ್ಳಿಗಳಿಗೆ ಕಲರ್ ಟಿವಿ. ಇದನ್ನು ಕೊಡಲು ಪ್ರಮುಖ ಕಾರಣವೆಂದರೆ ಕಲರ್ ಟೀವಿ ತರಬೇಕಿದ್ದರೆ ಅಲ್ಲಿಗೆ ರಸ್ತೆಯಾಗಬೇಕು, ಅದನ್ನು ನೋಡಬೇಕಿದ್ದರೆ ಕರೆಂಟು ಬೇಕು. ನಾವು ಇಲ್ಲಿಂದ ಎಷ್ಟರವರೆಗೆ ಆರಿಸಿಬರುತ್ತೇವೋ ಅಷ್ಟರವರೆಗೆ ರಸ್ತೆ, ಕರೆಂಟು ಇತ್ಯಾದಿ ವ್ಯವಸ್ಥೆ ಆಗುವುದು ಸಾಧ್ಯವಿಲ್ಲ. ಹೀಗಾಗಿ ಕಲರ್ ಟೀವಿಯನ್ನು ಕೊಂಡು ರಾಶಿ ಹಾಕುತ್ತೇವೆ. ಹರಾಜು ಕೂಡ ಹಾಕುತ್ತೇವೆ.

ಇಂಥ ಪ್ರಣಾಳಶಿಶುವನ್ನು ಕೊಟ್ಟರೆ ಮತದಾರರು ಅನಾಥರನ್ನಾಗಿ ಮಾಡುವುದಿಲ್ಲ ಎಂಬ ನಂಬಿಕೆ ಬರತೊಡಗಿದೆ. ಮರದ ಮೇಲಿನಿಂದ ಆಪಲ್ ಬಿದ್ದು ನ್ಯೂಟನ್ನನಿಗೆ ಗುರುತ್ವಾಕರ್ಷಣೆಯ ಬಗ್ಗೆ ಹೊಳೆದಂತೆ ಮುಂದೊಂದು ದಿನ ನಗೆ ಸಾಮ್ರಾಟರ ತಲೆಯ ಮೇಲೆ ತೆಂಗಿನ ಮರದಿಂದ ತೆಂಗಿನ ಕಾಯಿ ಬಿದ್ದು ಜ್ಞಾನೋದಯವಾಗಿ ಅವರು ಚುನಾವಣೆಯಲ್ಲಿ ನಿಲ್ಲುವ ತೀರ್ಮಾನ ಕೈಗೊಂಡರೆ ಇಂಥ ಭರ್ಜರಿ ‘ಪ್ರಣಾಳಶಿಶು’ಗಳಿಗೆ ಜನ್ಮ ನೀಡಲು ಬೊಗಳೆಯ ಕಿರಿಕಿರಿ ಸಂಪಾದಕನನ್ನು ಎತ್ತಿಹಾಕಿಕೊಂಡು ಬರಲು ತಮ್ಮ ಚೇಲ ಕುಚೇಲನನ್ನು ಅಟ್ಟಿದ್ದಾರೆ.

ಅಪಾರ

“ಅಳತೆ ಮೀರಿದರೆ ಆಪತ್ತು ಅಂತ ತಿಳಿದು ‘ಮದ್ಯಸಾರ’ವನ್ನು ಇಲ್ಲಿಗೆ ನಿಲ್ಲಿಸುತ್ತಿದ್ದೇನೆ. ಒಂದಷ್ಟು ಕತೆಗಳನ್ನು ಬರೆದು ನಂತರ ಏನೂ ಬರೆಯಲಾಗದೆ ಒದ್ದಾಡುತ್ತಿದ್ದ ನನಗೆ ಈ ಪುಟ್ಟ ಪದ್ಯಗಳ ಮೂಲಕ ಏನೇನೋ ಮರಳಿ ಸಿಕ್ಕಿದೆ; ಬರೆಯಬಹುದು ಎಂಬ ವಿಶ್ವಾಸವೂ ಸೇರಿದಂತೆ. ಬ್ಲಾಗಿಗೆ ನಿಯಮಿತವಾಗಿ ಓದುಗರನ್ನು ಸೆಳೆಯಲು ಸ್ವಾರಸ್ಯವಾದ ಮತ್ತು ಚುಟುಕಾದ ಏನಾದರೂ ಬೇಕು ಎಂಬ ಉದ್ದೇಶದಿಂದ ಶುರು ಮಾಡಿದ ಈ ಮದ್ಯದ ಕವಿತೆಗಳು ಇಷ್ಟೊಂದಾಗಬಹುದು ಎಂದು ನನಗೂ ಗೊತ್ತಿರಲಿಲ್ಲ. ಈಗ ನಿಲ್ಲಿಸಬೇಕು ಎಂದು ತೀರ್ಮಾನಿಸಿರುವಾಗ ಕುಡಿತವನ್ನು ಬಿಡುವಷ್ಟೇ ಕಷ್ಟವಾಗುತ್ತಿದೆ!”

ಎಂದು ಹೇಳಿ ನಮ್ಮಂತಹ ಅಸಂಖ್ಯ ಮದ್ಯಾಭಿಮಾನಿಗಳನ್ನು ಸಾರದಿಂದ ಮಂಚಿಸುವ ತೀರ್ಮಾನ ಮಾಡಿರುವ ಅಪಾರ ‘ಮದ್ಯಸಾರ’ ಪುಸ್ತಕವಾಗುತ್ತಿದೆ ಎಂದು ಹೇಳುವ ಮೂಲಕ ಹೊಸ ‘ಕಿಕ್’ ಕೊಟ್ಟಿದ್ದಾರೆ.

ಕಮೆಂಟಿಗಾಗಿ ಕಾದು ಕುಳಿತ ಸೋಸಿಲಿ ಚುನಾವಣೆಯ ಭರಾಟೆಯನ್ನು ಬಿಟ್ಟ ಕಣ್ಣುಗಳಿಂದ ಕಂಡು ಕಮೆಂಟ್ ಮಾಡಿದ್ದಾಳೆ. ಅದರದೊಂದು ಸ್ಯಾಂಪಲ್ಲು ಹೊತ್ತು ತಂದಿದ್ದಾರೆ ಬೀಟಿಗೆ ಹೋದ ಸಾಮ್ರಾಟರು:

ಇದೇ ವೇಳೆ ಜನರನ್ನು ತಮ್ಮ ಹಾಸ್ಯ’ಸುಧೆ’ಯಿಂದ ನಗೆ ಸಾಗರದಲ್ಲಿ ಮುಳುಗಿಸುವ ಟಿವಿ ಶೋ ಖ್ಯಾತಿಯ ಮಹಿಳೆಯೊಬ್ಬರು ಸಾಗರ ಕ್ಷೇತ್ರದಿಂದ ಪ್ರಮುಖ ಪಕ್ಷವೊಂದರ ಟಿಕೆಟ್ ಬೇಕು ಅಂತ ಗಲಾಟೆ ಶುರುಮಾಡಿರುವರಂತೆ. ಪಕ್ಷದವರು ಮೇಡಂರ ಟಿಕೆಟ್ ಬೇಡಿಕೆಯನ್ನೂ ಒಂದು ಜೋಕ್ ಎಂದು ಪರಿಗಣಿಸದಿರಲಿ ಎಂಬುದು ನಮ್ಮ ಸೀರಿಯಸ್ ಕಾಳಜಿ!

(ಕಳೆದ ವಾರದ ಬ್ಲಾಗ್ ಬೀಟ್)

ಬ್ಲಾಗ್ ಬೀಟ್ 5

13 ಮಾರ್ಚ್

ಕನ್ನಡದ ಬ್ಲಾಗುಗಳ ಲೋಕದಲ್ಲಿ ವಿಡಂಬನೆ, ಫೇಕ್ ನ್ಯೂಸ್, ಕಾಲೆಳೆಯುವಿಕೆ, ನವಿರಾದ ಹಾಸ್ಯ, ವಕ್ರತುಂಡೊಕ್ತಿ ಯಾವುದಕ್ಕೂ ಕೊರತೆಯಿಲ್ಲ. ವಾರಕ್ಕೊಂದು ಬಾರಿ ಕನ್ನಡದ ಬ್ಲಾಗು ತೋಟವನ್ನು ಹೊಕ್ಕು ಅಲ್ಲಿನ ರಸವತ್ತಾದ ಬರಹಗಳನ್ನು ಹೆಕ್ಕಿ ತಂದು ಪಟ್ಟಿ ಮಾಡುವ ಕೆಲಸವನ್ನು ಒಪ್ಪಿಕೊಂಡಿದ್ದಾರೆ ಸುದ್ದೀಶ. ಇವರ ಬ್ಲಾಗ್ ಬೀಟ್‌ಗೆ ನಿಮ್ಮ ಬ್ಲಾಗೂ ಈಡಾಗಬೇಕೆಂಬ ಆಸೆಯಿದ್ದರೆ ನಿಮ್ಮ ಬ್ಲಾಗಿನ ವಿಳಾಸ ಕೊಟ್ಟು ನಮ್ಮ ವಿಳಾಸಕ್ಕೆ ಒಂದು ಮಿಂಚಂಚೆ ಕಳುಹಿಸಿ.

ಅನಿವಾರ್ಯ ಕಾರಣಗಳಿಂದಾಗಿ ತುಂಬಾ ದಿನಗಳ ಕಾಲ ಸಾಮ್ರಾಟರಿಗೆ ಬ್ಲಾಗ್ ಬೀಟ್ ಹೊಡೆಯಲು ಸಾಧ್ಯವಾಗೇ ಇರಲಿಲ್ಲ. ಇದೇ ಸುಸಂದರ್ಭವನ್ನು ಬಳಸಿಕೊಂಡು ಅನೇಕ ಬ್ಲಾಗಿಗರು ಹುಲುಸಾದ ಬ್ಲಾಗಿನ ಬೆಳೆಯನ್ನು ತೆಗೆದು ಬ್ಲಾಕ್‌ನಲ್ಲಿ ಮಾರಿಕೊಂಡು ರತುನ ಟಾಟಾನ ‘ನಾನೋ’ ಕಾರ್ ಕೊಳ್ಳುವುದಕ್ಕಾಗಿ ಕೂಡಿಡುತ್ತಿದ್ದಾರೆ ಎಂಬ ಸ್ಫೋಟಕ ಮಾಹಿತಿ ಬಂದಾಗ ಸಾಮ್ರಾಟರು ಎದ್ದು ಬಿದ್ದು ಉಟ್ಟ ಬಟ್ಟೆಯಲ್ಲಿ ಬೀಟಿಗೆ ಹೊರಟರು. ಅವರ ಬೀಟಿನ ಏಟಿಗೆ caught ಆದ ಬರಹಗಳು ಇಲ್ಲಿವೆ.

ಪಂಚ್ ಕಾ ಸರಪಂಚ್

ಮರ್ಮಾಘಾತುಕ ಪಂಚ್ ಕೊಡುವುದರಲ್ಲಿ ನಿಸ್ಸೀಮರಾದ ಗಣೇಶ್ ಈ ಬಾರಿಯ ಬೀಟಿನಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಕಂಡುಕೊಂಡಿರುವುದು ಪತ್ತೆಯಾಗಿದೆ. ಬಿದ್ದರೂ ಮೀಸೆ ಮಣ್ಣಾಗಬಾರದೆಂದರೆ ಏನು ಮಾಡಬೇಕು… ಎಂಬ ಪ್ರಶ್ನೆಗೆ ಮೀಸೇನೇ ಇಟ್ಟುಕೊಂಡಿರಬಾರದು ಎಂಬ ಅಭೂತ ಪೂರ್ವ ಉತ್ತರ ಕಂಡುಕೊಂಡಿದ್ದಾರೆ. ಹಾಗೆಯೇ ನಾಸ್ತಿಕರಿಗೆ ದೇವರಿಲ್ಲ ಎಂಬ ಲೋಕವಿದಿತ ಸತ್ಯವನ್ನು ಖಡಾಖಂಡಿತವಾಗಿ ತುಂಡು ತುಂಡು ಮಾಡಿದ್ದಾರೆ.

…………………………………………..

ಮದ್ಯಸಾರ

ಜಿ.ಪಿ.ರಾಜರತ್ನಂರ ರತ್ನಂಗೆ ಒಬ್ಬ ಸಮರ್ಥ ಗೆಳೆಯ ಹುಟ್ಟಿಕೊಂಡವ್ನೆ… ಗುರ್…ಅಪಾರ ಬ್ಲಾಗಲ್ಲಿ. ಮದ್ಯ ಸಾರದ ಮಾದಕತೆಯ ಮಧ್ಯದಲ್ಲಿ ಆತ ಆಲಾಪಿಸುತ್ತಿದ್ದ ಪದ್ಯವೊಂದನ್ನು ಕೇಳದೆ ಕದ್ದು ತಂದಿದ್ದಾರೆ ನಗೆ ಸಾಮ್ರಾಟ್:

ಚಳಿಗಾಲದ ಸಂಜೆ ಹಿತವಾಗಿ ಆವರಿಸಿದೆ

ಸುರಿಯುತಿಹ ಮಳೆ ಹೂವಂತೆ ನೇವರಿಸಿದೆ

ಈ ಖುಷಿಗೆ ಕುಡಿಯಲು ಗೆಳೆಯರೊಬ್ಬರೂ ಇಲ್ಲ

ಹಾಗೆಂದು ಸುಮ್ಮನುಳಿದರೆ ದೇವರೂ ಕ್ಷಮಿಸಲ್ಲ.

ಈ ಎಂಡ್ಕುಡ್ಕನ ಪದಗಳನ್ನು ಕೇಳಿದರೆ ಎಂಥಾ ಸಾಚಾನಿಗಾದರೂ ನಿಶೆಯ ಕಿಕ್ ಏರದಿರದು.

…………………………………………..

ಮಜಾವಾಣಿ

ಬಹಳ ದಿನಗಳ ನಂತರ ಮಜಾವಾಣಿಯ ವದರಿಗಾರರು ಕಾರ್ಯಪ್ರವೃತ್ತರಾಗಿ ಹಲವು ಕೌತುಕದ ವದರಿಗಳನ್ನು ಹೆಕ್ಕಿತಂದಿದ್ದಾರೆ. ” ನೀವು ತಿಂದ ನಂತರ ಎಸೆಯುವ ಎಂಜೆಲೆಯಲ್ಲಿ ಕೊಲೆಸ್ಟ್ರಾಲ್, ಸಕ್ಕರೆ ಅಂಶವಿರದಂತೆ ನೋಡಿಕೊಳ್ಳಿ, ನಾಯಿಗಳ ಆರೋಗ್ಯದ ಬಗ್ಗೆ ಕಾಳಜಿ ಇರಲಿ” ಎಂದುಠರಾವು ಹೊರಡಿಸಿರುವ ಮೇಡಮ್ ಮನೇಕಾರ ಮಾತುಗಳು ಮಜಾವಾಣಿಯಲ್ಲಿ ಪ್ರಕಟವಾಗಿವೆ.

ನಾಯಿಗಳು ನನ್ನ ಮಕ್ಕಳಿದ್ದಂತೆ ಎಂದು ಅವರು ಹೇಳಿದ್ದನ್ನೇ ಕೆಲವು ಕುಹಕಿಗಳು ಅಪಾರ್ಥಮಾಡಿಕೊಂಡಿರುವುದು ಸಾಮ್ರಾಟರ ಗಮನಕ್ಕೆ ಬಂದಿದೆ.

…………………………………………..

ಬರೀ ಬೊಗಳೆ

ಇಡೀ ಜಗತ್ತಿನ ಸುದ್ದಿಗಾರರು ಮಲಗಿದರೂ, ಮೈಮರೆತರೂ ಬೊಗಳೂರಿನ ‘ಸದ್ದು’ಗಾರರು ಮಾತ್ರ ಏನಾದರೊಂದು ರದ್ದಿ ಹುಡುಕುತ್ತಲೇ ಇರುತ್ತಾರೆ. ಅಂಪೈರ್ ಬೆರೆಳೆತ್ತೋದೂ ಜನಾಂಗೀಯ ನಿಂದನೆ ಎಂದು ಕಿರ್ ಕಿರಿ ಪೇಂಟಿಂಗ್ ಅವರಿಗಾಗಿ ಸಂದರ್ಶನದಲ್ಲಿ ಹೇಳಿಕೆ ನೀಡಿದ್ದಾನೆ.

ಅತ್ತ ಆಸ್ಟ್ರೇಲಿಯಾದಲ್ಲಿ ಕ್ರೀಡಾ ಬೊಗಳೆ ಸುತ್ತಿಕೊಂಡು ಇತ್ತ ಬೊಗಳೂರಿನಲ್ಲಿ ಯಾವ ಪಕ್ಷದಲ್ಲಿದ್ದೇನೆ ಎಂಬುದನ್ನೇ ಮರೆತ ಎಂಪಿಯನ್ನು ಬೆನ್ನತ್ತಿದ್ದಾರೆ. ಮಧ್ಯ ಸ್ವಲ್ಪ ಸಮಯ ಮಾಡಿಕೊಂಡು ಅಪರೂಪದ ಸಂಶಯಶೋಧನೆಗಳ ಬಗ್ಗೆ ವದರಿ ಮಾಡಿದ್ದಾರೆ.

(ಕಳೆದ ವಾರದ ಬ್ಲಾಗ್ ಬೀಟ್)