ಕನ್ನಡದ ಬ್ಲಾಗುಗಳ ಲೋಕದಲ್ಲಿ ವಿಡಂಬನೆ, ಫೇಕ್ ನ್ಯೂಸ್, ಕಾಲೆಳೆಯುವಿಕೆ, ನವಿರಾದ ಹಾಸ್ಯ, ವಕ್ರತುಂಡೊಕ್ತಿ ಯಾವುದಕ್ಕೂ ಕೊರತೆಯಿಲ್ಲ. ವಾರಕ್ಕೊಂದು ಬಾರಿ ಕನ್ನಡದ ಬ್ಲಾಗು ತೋಟವನ್ನು ಹೊಕ್ಕು ಅಲ್ಲಿನ ರಸವತ್ತಾದ ಬರಹಗಳನ್ನು ಹೆಕ್ಕಿ ತಂದು ಪಟ್ಟಿ ಮಾಡುವ ಕೆಲಸವನ್ನು ಒಪ್ಪಿಕೊಂಡಿದ್ದಾರೆ ನಗೆಸಾಮ್ರಾಟ್. ಇವರ ಬ್ಲಾಗ್ ಬೀಟ್ಗೆ ನಿಮ್ಮ ಬ್ಲಾಗೂ ಈಡಾಗಬೇಕೆಂಬ ಆಸೆಯಿದ್ದರೆ ನಿಮ್ಮ ಬ್ಲಾಗಿನ ವಿಳಾಸ ಕೊಟ್ಟು ನಮ್ಮ ವಿಳಾಸಕ್ಕೆ ಒಂದು ಮಿಂಚಂಚೆ ಕಳುಹಿಸಿ.
……………………………………………………
ಟೂನಂಗಡಿ 
ಟೂನಂಗಡಿ ತೆರೆದು ಕೂತಿರುವ ಅಮೃತ್.ವಿ ಉದಯವಾಣಿಯಲ್ಲಿ ಪ್ರಕಟವಾದ ತಮ್ಮ ಕಾರ್ಟೂನುಗಳಲ್ಲಿ ಕೆಲವನ್ನು ಬ್ಲಾಗಿಗೆ ಹಾಕಿರುವುದು ಬೀಟ್ ಹೊರಟ ಸಾಮ್ರಾಟರ ಕಣ್ಣಿಗೆ ಬಿತ್ತು. ಹಾಗೆ ಕಣ್ಣಿಗೆ ಬಿದ್ದದ್ದನ್ನು ಸಾವಕಾಶವಾಗಿ ಹೊರಗೆ ತೆಗೆದು ಅವರು ಇಲ್ಲಿ ಹಾಕಿದ್ದಾರೆ.
ಪಂಚ್ ಲೈನು
ಹುಡುಗಿಯರ ವಿಷಯದಲ್ಲೂ ರಾಜಕಾರಣದಲ್ಲೂ ತಲಾ ಒಂದೊಂದಾಗಿ ಪಿ.ಎಚ್.ಡಿ ಮಾಡುತ್ತಿರುವಂತೆ ಕಾಣುವ ಪಂಚ್ ಲೈನ್ ಗಣೇಶರು ಹುಡುಗಿಯರ ಮನಸ್ಸು ಗೆಲ್ಲೋದು ಚುನಾವಣೆ ಗೆಲ್ಲೋದೂ ಆಲ್ಮೋಸ್ಟ್ ಸೇಮ್ ಅಂತಾರೆ. ಹೇಗೆ ಅಂದ್ರಾ? ಇಲ್ ನೋಡಿ…
ಪುಗಸಟ್ಟೆ
ರಾಜಕೀಯದಲ್ಲಿನ ಎಡದ ಬಲ ಹಾಗೂ ಬಲದ ಎಡದ ಸುಳಿಯಲ್ಲಿ ಪುಗಸಟ್ಟೆ ಉಪದೇಶ ಕೊಡುವ ಬ್ಲಾಗಿಗರು ಒಂದು ಗಂಭೀರ ಪ್ರಶ್ನೆ ಕೇಳಿದ್ದಾರೆ. ‘ಈ ಘಟನೆ’ ಭಾರತದಲ್ಲಿ ನಡೆಯುವುದು ಯಾವಾಗ ಎಂಬುದು ಅವರ ಪ್ರಶ್ನೆ. ಇದಕ್ಕೆ ಉತ್ತರಿಸಬೇಕಾದಾವರು, ಮಾತನಾಡದೆ ಮಾಡಿ ತೋರಿಸುವವರನ್ನು ಹುಡುಕಿ ನಮ್ಮ ಚೇಲ ದೇಶಾಂತರ ಹೊರಟಿದ್ದಾನೆ.
ಬೊಗಳೆ
ಅಶಿಕ್ಷಿತರು, ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾದವರೇ ತುಂಬಿ ಹೋಗಿರುವ ರಾಜಕೀಯ ರಂಗಕ್ಕೆ ಸುಶಿಕ್ಷಿತರು ಧುಮುಕುತ್ತಿರುವ ವಿದ್ಯಮಾನದ ಸಮಗ್ರ ವರದಿಯನ್ನು ಬೊಗಳೆ ಬ್ಯೂರೋ ಪ್ರಕಟಿಸಿದೆ. ಮಾನವಿಲ್ಲದ ದಂಡ ಪಿಂಡಗಳಾದ ರಾಜಕಾರಣಿಗಳಿಗೆ ಮಾನದಂಡವನ್ನು ವಿಧಿಸುವ ಮಹೋನ್ನತ ಕಾರ್ಯಕ್ಕೆ ಕೈ ಹಾಕಿದೆ. ಅವರ ಸಾಹಸಕ್ಕೆ ಸಂತಾಪ ಸೂಚಿಸುತ್ತಾ ನಾವು ಅಲ್ಲಿಂದ ಪರಾರಿಯಾಗಿದ್ದೇವೆ.
ಮೋಟುಗೋಡೆ
ಇರುವ ಮೋಟು ಗೋಡೆಯನ್ನು ಎಗರಿ ಎಗರಿ ಜಿರಾಫೆಯಂತೆ ಎತ್ತರವಾಗಿರುವ ಮೋಟುಗೋಡೆ ಬಳಗ ಕಂಪ್ಯೂಟರ್ ಕರ್ಮಕಾಂಡವನ್ನು ವರದಿ ಮಾಡಿದೆ. ರಿಸೆಷನ್ ಸಮಯದಲ್ಲಿ ಎಲ್ಲರನ್ನೂ ಕಾಡುತ್ತಿರುವ ಕಂಪ್ಯೂಟರ್ ಕರ್ಮ ಕಾಂಡವಲ್ಲ ಇದು. ಇದು ಮೋಟುಗೋಡೆಯ ಸ್ಪೆಷಲ್ ‘ಡಿಕ್’ಆಕ್ಷನ್!
ಮಜಾವಾಣಿ
ಮಜಾವಾಣಿ ಪತ್ರಿಕೆ ಈಗ ಮೈತುಂಬಿಕೊಂಡು ನಿಂತಿದೆ. ಅಗ್ರ ರಾಷ್ಟ್ರೀಯ ವಾರ್ತೆಯಿಂದ ಹಿಡಿದು ವಿಶೇಷ ಸಂದರ್ಶನದವರೆಗೆ ಎಲ್ಲಾ ವಿಭಾಗಗಳಲ್ಲೂ ನೈಪುಣ್ಯತೆ ಮೆರೆದಿದೆ.
ಈ ಸಂಚಿಕೆಯಲ್ಲಿ ಹಿನ್ನೆಲೆ ಕೆಮ್ಮು ಕಲಾವಿದ ದಮ್ಮುಲ ಕೃಷ್ಣಪ್ಪನವರ ಅಪರೂಪದ ಸಂದರ್ಶವನ್ನು ಪ್ರಕಟಿಸಲಾಗಿದೆ. ಕೆಮ್ಮಾಭಿಮಾನಿಗಳು ಹಾಗೂ ದಮ್ಮಾಭಿಮಾನಿಗಳು ಅವಶ್ಯಕವಾಗಿ ಓದಲೇಬೇಕಾದ ಸಂದರ್ಶನವಿದು.
ಬ್ಲಾಗ್ ಬೀಟ್ 9
17 ಜೂನ್ಕನ್ನಡದ ಬ್ಲಾಗುಗಳ ಲೋಕದಲ್ಲಿ ವಿಡಂಬನೆ, ಫೇಕ್ ನ್ಯೂಸ್, ಕಾಲೆಳೆಯುವಿಕೆ, ನವಿರಾದ ಹಾಸ್ಯ, ವಕ್ರತುಂಡೊಕ್ತಿ ಯಾವುದಕ್ಕೂ ಕೊರತೆಯಿಲ್ಲ. ವಾರಕ್ಕೊಂದು ಬಾರಿ ಕನ್ನಡದ ಬ್ಲಾಗು ತೋಟವನ್ನು ಹೊಕ್ಕು ಅಲ್ಲಿನ ರಸವತ್ತಾದ ಬರಹಗಳನ್ನು ಹೆಕ್ಕಿ ತಂದು ಪಟ್ಟಿ ಮಾಡುವ ಕೆಲಸವನ್ನು ಒಪ್ಪಿಕೊಂಡಿದ್ದಾರೆ ಸುದ್ದೀಶ. ಇವರ ಬ್ಲಾಗ್ ಬೀಟ್ಗೆ ನಿಮ್ಮ ಬ್ಲಾಗೂ ಈಡಾಗಬೇಕೆಂಬ ಆಸೆಯಿದ್ದರೆ ನಿಮ್ಮ ಬ್ಲಾಗಿನ ವಿಳಾಸ ಕೊಟ್ಟು ನಮ್ಮ ವಿಳಾಸಕ್ಕೆ ಒಂದು ಮಿಂಚಂಚೆ ಕಳುಹಿಸಿ.
………………………………………………………………
ಬೊಗಳೆ ರಗಳೆ
ಇಂಧನ ಬೆಲೆಯೇರಿಕೆಯ ವಿರುದ್ಧ ವಾಹನ ಚಾಲಕರು ಬೈದಾಡಿ ಬಾಯಿ ಸೇವೆ ಮುಗಿಸಿಕೊಂಡು ತಮ್ಮ ಗಾಡಿಗಳಿಗೆ ಇಂಧನ ತುಂಬಿಸಿಕೊಂಡು ರೊಯ್ಯನೆ ಹೊರಡುತ್ತಿರುವಾಗ ಬೊಗಳೆ ರಗಳೆರ ಸೊಂಪಾದಕರಿಗೆ ಸಂಕಟದ ಸ್ಥಿತಿ ಬಂದಿದೆ. ಬೊಗಳೆ ಬಿಡುವುದರಲ್ಲಿ ಬೊಗಳೂರಿನಲ್ಲೇ ಫೇಮಸ್ಸಾದ ಸೊಂಪಾದಕರನ್ನೇ ಮೀರಿಸುವ ಹಾಗೆ ಎಡ, ಬಲ ಪಕ್ಷಗಳು, ಕೈ ಕಾಲು ಪಕ್ಷಗಳು, ನಿಧಾನ ಮಂತ್ರಿ, ಪಿತ್ಥ ಸಚಿವರು ಬೊಗಳೆ ಬಿಡುತ್ತಿರುವುದನ್ನು ಕಂಡು ಅಕ್ಷರಶಃ ಕಂಗಾಲಾಗಿದ್ದಾರೆ.
ವಿಜ್ಞಾನಿಗಳು ಗಾಳ ಹಾಕಿ ಮೀನುಗಳನ್ನು ಹಿಡಿಯುವ ಕೋತಿಯನ್ನು ಪತ್ತೇ ಹಚ್ಚಿರುವುದನ್ನು ಎಸ್.ಎಂ.ಎಸ್ ಮೂಲಕ ತಿಳಿದು ಗಾಬರಿಯಿಂದ ನಾಪತ್ತೆಯಾಗಿದ್ದ ಏಕಸದಸ್ಯ ಬ್ಯೂರೋದ ಸಮಸ್ತ ಸಿಬ್ಬಂದಿ ಈಗ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಏಕೆಂದಿರಾ? ಇಲ್ಲಿ ಓದಿ…
ಪ್ರಕಾಶ್ ಶೆಟ್ಟಿ ಗೆರೆಗಳ ಪಂಚ್
ಬೆಲೆಯೇರಿಕೆ, ಪೆಟ್ರೋಲು ಬೆಲೆ ತುಟ್ಟಿ… ಕಾಂಗ್ರೆಸ್ ಸರಕಾರದ ನಿಷ್ಠೆಯ ನವೀಕರಣ… ಎಲ್ಲಕ್ಕೂ ಪ್ರಕಾಶ್ ಶೆಟ್ಟಿ ಗೆರೆಗಳನ್ನು ಕೊಟ್ಟಿದ್ದಾರೆ, ಗೆರೆಗಳ ಮೂಲಕ ಬರೆ ಎಳೆದಿದ್ದಾರೆ. ಇಲ್ಲಿ ನೋಡಿ ೧ ೨ ೩.
ಪಂಚ್ ಲೈನ್
ಪಂಚಿಗಾಗಿ ಲೈನುಗಳನ್ನು ಬರೆಯುವ ಗಣೇಶ್ ಬಹುದೊಡ್ಡ ಮ್ಯಾನೇಜ್ ಮೆಂಟ್ ಗುರುವಾಗುವ ಎಲ್ಲಾ ಲಕ್ಷಣಗಳನ್ನು ತೋರ್ಪಡಿಸುತ್ತಿದ್ದಾರೆ. ಅವರ ಇತ್ತೀಚಿನ ಪಂಚ್ ಸಾಲುಗಳನ್ನೇ ನೋಡಿ…
ಕೊಲೆ ಮಾಡಿಯೂ ಶಿಕ್ಷೆ ಅನುಭವಿಸಬಾರದೆಂದರೆ ಏನು ಮಾಡಬೇಕು?
ನಿಷ್ಪಕ್ಷಪಾತ, ಸತ್ಯನಿಷ್ಠತೆ, ನ್ಯಾಯಯುತ ಸುದ್ದಿಗೆ ಅತ್ಯುತ್ತಮ ಉದಾಹರಣೆ ಯಾವುದು?
ಪೆಟ್ರೋಲ್ ಡಿಸೇಲ್ ಬೆಲೆ ಗಗನಕ್ಕೇರಿದೆ ನಾವೇನು ಮಾಡಬಹುದು?
ಕಾಲ ಚಕ್ರ
ಸಮೃದ್ಧ ಸರಕಾರಕ್ಕೆ ಮೂರೇ ಗೇಣು ಎಂದು ಹಲುಬುತ್ತಿರುವ ಬಿಜೆಪಿ ಸರಕಾರ ಭಿನ್ನಮತೀಯತೆಯನ್ನು ಶಮನ ಮಾಡಿ ಶವಸಂಸ್ಕಾರ ಮಾಡುವುದಕ್ಕೆ ಏನು ಮಾಡಬೇಕು ಅನ್ನೋ ಪ್ರಶ್ನೆಗೆ ನಮ್ ನಂಜ ಹಿಂಗಂತ ಉತ್ತರಿಸವ್ನೆ ಇಲ್ಲಿ… ‘ಹಂಗಲ್ಲ ಸರ್ರ, ಕೊನಿಗೆ ನೂರಾ ಹತ್ತು ಜನಕ್ಕ ನೂರಾ ಹತ್ತು ಮಂತ್ರಿಗಳಾದ್ರೂ ಆದ್ರೆ ಆವಾಗ ಭಿನ್ನ ಮತಾನೇ ಇರಂಗಿಲ್ಲ ಏನಂತೀರಿ…’
………………………………………………………………
ಕಳೆದ ಸಂಚಿಕೆಯ ಬ್ಲಾಗ್ ಬೀಟ್
ಟ್ಯಾಗ್ ಗಳು:ಗಣೇಶ್, ಪಂಚ್ ಲೈನ್, ಪ್ರಕಾಶ್ ಶೆಟ್ಟಿ, ಬೊಗಳೆ ರಗಳೆ, ಬ್ಲಾಗ್ಸ್, blogs, comments